ಅರಣ್ಯ ಇಲಾಖೆಯ ನಡುತೋಪಿನಲ್ಲಿ ಅಕ್ರಮ ಮರ ಕಡಿತ: ಅಧಿಕಾರಿಗಳ ಶಾಮೀಲು ಶಂಕೆ - Mahanayaka

ಅರಣ್ಯ ಇಲಾಖೆಯ ನಡುತೋಪಿನಲ್ಲಿ ಅಕ್ರಮ ಮರ ಕಡಿತ: ಅಧಿಕಾರಿಗಳ ಶಾಮೀಲು ಶಂಕೆ

chikkamagaluru
15/05/2025

ಕೊಟ್ಟಿಗೆಹಾರ: ಬಣಕಲ್ ಸಮೀಪದ ಗುಡ್ಡಟ್ಟಿ ಗ್ರಾಮದ ಸರ್ವೆ ನಂಬರ್ 254 ರಲ್ಲಿ ಅರಣ್ಯ ಇಲಾಖೆಗೆ ಸೇರಿದ ಅಕೇಶಿಯ ನಡುತೋಪಿನಲ್ಲಿ ಅಕ್ರಮ ಮರ ಕಡಿತ ನಡೆದಿದೆ. ಸ್ಥಳೀಯರ ಪ್ರಕಾರ, ಬೆಲೆಬಾಳುವ ಅಕೇಶಿಯ ಮರಗಳನ್ನು ಕಡಿದು ಗುಪ್ತವಾಗಿ ಸಾಗಾಣಿಕೆ ಮಾಡಲಾಗಿದೆ.

ಸ್ಥಳೀಯರು ಈ ಕುರಿತಾಗಿ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಈ ಕುರಿತು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮರಗಳ ವರವನ್ನು ವಶಪಡಿಸಿಕೊಂಡು ತನಿಖೆಗೆ ಮುಂದಾಗಿದ್ದಾರೆ.

ಆದರೆ ಈ ಅಕ್ರಮದಲ್ಲಿ ಅರಣ್ಯ ಇಲಾಖೆಯ ಕೆಲ ಅಧಿಕಾರಿಗಳೇ ಶಾಮೀಲು ಆಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳೀಯರ ಆರೋಪದಂತೆ, ಅಧಿಕಾರಿಗಳ ಮನೆಯ ಪೀಠೋಪಕರಣಗಳಿಗಾಗಿ ಈ ಮರಗಳನ್ನು ಕಡಿತ ಮಾಡಲಾಗಿದೆ ಎನ್ನಲಾಗಿದೆ.

ಸ್ಥಳೀಯರ ಒತ್ತಾಯದ ಮೇರೆಗೆ ಘಟನೆಗೆ ಸಂಬಂಧಿಸಿದಂತೆ ತನಿಖೆ ಗಂಭೀರವಾಗಿ ಕೈಗೊಳ್ಳಬೇಕೆಂದು ಬೇಡಿಕೆ ಎತ್ತಲಾಗಿದೆ. ಅರಣ್ಯ ಸಂಪತ್ತನ್ನು ಕಾಪಾಡುವಲ್ಲಿ ಅಧಿಕಾರಿಗಳು ನಿರ್ಲಕ್ಷ ತೋರಿದ್ದು.ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು  ಆಗ್ರಹಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ