ಹರಿಯಾಣದಲ್ಲಿ ಮುಸ್ಲಿಂ ಮೀಸಲಾತಿಯನ್ನು ಕೊಡಲು ನಾವು ಬಿಡಲ್ಲ: ಅಮಿತ್ ಶಾ ವಿವಾದಾತ್ಮಕ ಹೇಳಿಕೆ - Mahanayaka

ಹರಿಯಾಣದಲ್ಲಿ ಮುಸ್ಲಿಂ ಮೀಸಲಾತಿಯನ್ನು ಕೊಡಲು ನಾವು ಬಿಡಲ್ಲ: ಅಮಿತ್ ಶಾ ವಿವಾದಾತ್ಮಕ ಹೇಳಿಕೆ

16/07/2024


Provided by

ಕರ್ನಾಟಕದಲ್ಲಿ ಹಿಂದುಳಿದ ವರ್ಗಗಳಿಂದ ಮೀಸಲಾತಿಯನ್ನು ಕಸಿದುಕೊಂಡು ಮುಸ್ಲಿಮರಿಗೆ ಕಾಂಗ್ರೆಸ್ ನೀಡಿದೆ ಎಂದು ಗೃಹ ಸಚಿವ ಅಮಿತ್ ಶಾ ಮಂಗಳವಾರ ಆರೋಪಿಸಿದ್ದಾರೆ.

ಈ ವರ್ಷದ ಕೊನೆಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಹರಿಯಾಣದಲ್ಲಿ ಅಮಿತ್ ಶಾ ಈ ಹೇಳಿಕೆ ನೀಡಿದ್ದಾರೆ.

ಹರ್ಯಾಣದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸಿದ್ರೆ ಅವರು ಹರಿಯಾಣದಲ್ಲಿಯೂ ಅದೇ ರೀತಿ ಮಾಡುತ್ತಾರೆ ಎಂದು ಅವರು ಹೇಳಿದರು. ಹಿಂದುಳಿದ ವರ್ಗಗಳ ಸಮ್ಮಾನ್ ಸಮ್ಮೇಳನದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಯಾವಾಗಲೂ ಹಿಂದುಳಿದ ವರ್ಗಗಳ ವಿರುದ್ಧವಾಗಿದೆ. ಮುಸ್ಲಿಮರಿಗೆ ಮೀಸಲಾತಿ ವಿಷಯವನ್ನು ಎತ್ತುವುದು 2024 ರ ಚುನಾವಣೆಗೆ ಮುಂಚಿತವಾಗಿ ದೊಡ್ಡ ಸುದ್ದಿಯಾಗಿದೆ ಎಂದು ಹೇಳಿದರು.

ತಮ್ಮ ಪ್ರತಿಸ್ಪರ್ಧಿಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅಮಿತ್ ಶಾ, 1957 ರ ಕಾಕಾ ಕಾಲೇಲ್ಕರ್ ಆಯೋಗದ ವರದಿಯನ್ನು ಉಲ್ಲೇಖಿಸಿದರು. ಕಾಂಗ್ರೆಸ್ ಅದರ ಶಿಫಾರಸುಗಳನ್ನು ಜಾರಿಗೆ ತರಲು ವಿಳಂಬ ಮಾಡಿದೆ ಎಂದು ಗಮನಸೆಳೆದರು. 1980ರಲ್ಲಿ ಇಂದಿರಾ ಗಾಂಧಿ ಮಂಡಲ್ ಆಯೋಗವನ್ನು ಕೈಬಿಟ್ಟಿದ್ದರು. 1990 ರಲ್ಲಿ ಮೀಸಲಾತಿಯನ್ನು ಪರಿಚಯಿಸಿದಾಗ ರಾಜೀವ್ ಗಾಂಧಿ ಒಬಿಸಿ ಮೀಸಲಾತಿಯನ್ನು ವಿರೋಧಿಸಿದರು.
2014 ರಲ್ಲಿ ನರೇಂದ್ರ ಮೋದಿ ಮೊದಲ ಬಾರಿಗೆ ಪ್ರಧಾನಿಯಾದ ನಂತರವೇ ದಲಿತರು, ಬಡವರು ಮತ್ತು ಹಿಂದುಳಿದ ಜನರ ಸರ್ಕಾರವಿದೆ ಎಂದು ಶಾ ಘೋಷಿಸಿದ್ದರು.

ಕ್ಯಾಬಿನೆಟ್ ನ 71 ಮಂತ್ರಿಗಳಲ್ಲಿ 27 ಮಂದಿ ಹಿಂದುಳಿದ ವರ್ಗಗಳಿಗೆ ಸೇರಿದವರು ಎಂಬ ಅಂಶವನ್ನು ಅವರು ಉಲ್ಲೇಖಿಸಿದರು. “ಹರಿಯಾಣದಲ್ಲಿ ಮುಸ್ಲಿಂ ಮೀಸಲಾತಿಯನ್ನು ನಾವು ಅನುಮತಿಸುವುದಿಲ್ಲ ಎಂದು ನಾನು ನಿಮಗೆ ಭರವಸೆ ನೀಡಲು ಬಯಸುತ್ತೇನೆ” ಎಂದು ಅಮಿತ್ ಶಾ ಇದೇ ವೇಳೆ ಹೇಳಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ