3:08 AM Saturday 24 - January 2026

ಕೇಂದ್ರ ಗೃಹ ಸಚಿವರ ವಿರುದ್ಧದ ಆರೋಪ: ಕೆನಡಾ ಅಧಿಕಾರಿಗೆ ಭಾರತ ಸಮನ್ಸ್

02/11/2024

ಭಾರತದ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧದ ಕೆನಡಾದ ಸಚಿವರ ಆರೋಪಗಳನ್ನು ಕೇಂದ್ರ ಸರ್ಕಾರವು “ಅಸಂಬದ್ಧ ಮತ್ತು ಆಧಾರರಹಿತ” ಎಂದು ತಳ್ಳಿಹಾಕಿದೆ. ಅಲ್ಲದೇ ಕೆನಡಾದ ಹೈಕಮಿಷನ್ ಪ್ರತಿನಿಧಿಯನ್ನು ಶುಕ್ರವಾರ ಕರೆದು ಈ ಆರೋಪಗಳ‌ ಬಗ್ಗೆ ಪ್ರತಿಭಟಿಸಿ ಪತ್ರವೊಂದನ್ನು ಅಧಿಕಾರಿಗೆ ಹಸ್ತಾಂತರಿಸಲಾಯಿತು.

ಇಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, “ಕೆನಡಾದ ಇತ್ತೀಚಿನ ಗುರಿಯ ಬಗ್ಗೆ, ನಾವು ನಿನ್ನೆ ಕೆನಡಾದ ಹೈಕಮಿಷನ್ ಪ್ರತಿನಿಧಿಯನ್ನು ಕರೆದಿದ್ದೇವೆ. ಉಪ ಮಂತ್ರಿ ಡೇವಿಡ್ ಮಾರಿಸನ್ ಅವರು ಸಮಿತಿಯ ಮುಂದೆ ಭಾರತದ ಕೇಂದ್ರ ಗೃಹ ಸಚಿವರ ಬಗ್ಗೆ ಮಾಡಿದ ಅಸಂಬದ್ಧ ಮತ್ತು ಆಧಾರರಹಿತ ಉಲ್ಲೇಖಗಳನ್ನು ಭಾರತ ಸರ್ಕಾರ ತೀವ್ರವಾಗಿ ವಿರೋಧಿಸುತ್ತದೆ ಎಂದು ಟಿಪ್ಪಣಿಯಲ್ಲಿ ತಿಳಿಸಲಾಗಿದೆ.

ಖಾಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಅವರ ಹತ್ಯೆಯ ತನಿಖೆಯು ಭಾರತ ಸರ್ಕಾರದ ಏಜೆಂಟರು ಮತ್ತು ಕೆನಡಾದಲ್ಲಿ ನಡೆದ “ನರಹತ್ಯೆಗಳು ಮತ್ತು ಹಿಂಸಾತ್ಮಕ ಕೃತ್ಯಗಳ” ನಡುವಿನ ಸಂಪರ್ಕವನ್ನು ಬಹಿರಂಗಪಡಿಸಿದೆ ಎಂದು ಕೆನಡಾದ ಪೊಲೀಸರು ಸಾರ್ವಜನಿಕವಾಗಿ ಆರೋಪಿಸುವ ಮೊದಲೇ ಜಸ್ಟಿನ್ ಟ್ರುಡೊ ನೇತೃತ್ವದ ಸರ್ಕಾರದ ಇಬ್ಬರು ಹಿರಿಯ ಅಧಿಕಾರಿಗಳು ಇತ್ತೀಚೆಗೆ ಭಾರತದ ವಿರುದ್ಧ ಗುಪ್ತಚರ ಮತ್ತು ಸೂಕ್ಷ್ಮ ಮಾಹಿತಿಯನ್ನು ವಾಷಿಂಗ್ಟನ್ ಪೋಸ್ಟ್ ಗೆ ಸೋರಿಕೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ.

 

ಕೆನಡಾದಲ್ಲಿ ಸಿಖ್ ಪ್ರತ್ಯೇಕತಾವಾದಿಗಳ ಮೇಲೆ ದಾಳಿ ನಡೆಸುವ ಸಂಚುಗಳ ಹಿಂದೆ ಪ್ರಧಾನಿ ಮೋದಿ ನೇತೃತ್ವದ ಸರ್ಕಾರದ ಉನ್ನತ ಶ್ರೇಣಿಯ ಅಧಿಕಾರಿಯೊಬ್ಬರು ಇದ್ದಾರೆ ಎಂದು ಉಪ ವಿದೇಶಾಂಗ ಸಚಿವ ಡೇವಿಡ್ ಮಾರಿಸನ್ ಮಂಗಳವಾರ ಸಂಸದೀಯ ಸಮಿತಿಗೆ ತಿಳಿಸಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ

Exit mobile version