ಬಾಲಕನ ಮೃತದೇಹದಲ್ಲಿ ಕಿವಿ-ಮೂಗು ಇರಲಿಲ್ಲ | ನಾಪತ್ತೆಯಾಗಿದ್ದ ಬಾಲಕನ ಭೀಕರ ಸಾವು
ಜೈಪುರ: ಬಾಲಕನೋರ್ವನನ್ನು ಹಣಕ್ಕಾಗಿ ಸಂಬಂಧಿಕರೇ ಭೀಕರವಾಗಿ ಹತ್ಯೆ ಮಾಡಿದ ಅಮಾನವೀಯ ಘಟನೆ ಜೈಪುರದ ಅಲ್ವಾರ್ ನವಾಲಿ ಗ್ರಾಮದಲ್ಲಿ ನಡೆದಿದ್ದು, ಬಾಲಕ ನಾಪತ್ತೆಯಾದ ಬಳಿಕ ಆತನ ಮೃತದೇಹ ಪತ್ತೆಯಾಗಿತ್ತು. ಆದರೆ ಮೃತದೇಹದ ಹಲವು ಅಂಗಗಳನ್ನು ಕತ್ತರಿಸಿರುವುದು ಕಂಡು ಬಂದಿದೆ.
11 ವರ್ಷದ ಬಾಲಕ ಶನಿವಾರ ಬೆಳಗ್ಗೆ 11 ಗಂಟೆಗೆ ಬಾಲಕ ನಾಪತ್ತೆಯಾಗಿದ್ದ. ಭಾನುವಾರ ಬಾಲಕನ ಮೃತದೇಹ ಸ್ಥಳೀಯ ಜಮೀನಿನಲ್ಲಿ ಪತ್ತೆಯಾಗಿದೆ. ಮೃತದೇಹದ ಮೂಗು ಹಾಗೂ ಕಿವಿಯನ್ನು ಕತ್ತರಿಸಲಾಗಿದೆ.
ಮೇಲ್ನೋಟಕ್ಕೆ ಇದನ್ನು ಗಮನಿಸಿದರೆ, ಯಾವುದೋ ಅನಿಷ್ಠ ಆಚರಣೆಗಾಗಿ ಬಾಲಕನನ್ನು ಬಲಿ ನೀಡಿರುವಂತೆ ಕಂಡು ಬಂದಿದೆ. ಈ ಬಗ್ಗೆ ಬಾಲಕ ತಂದೆ ಪೊಲೀಸರಿಗೆ ದೂರು ನೀಡಿದ್ದು, ತನ್ನ ಹಲವು ಸಂಬಂಧಿಕರ ಹೆಸರನ್ನು ಬಹಿರಂಗಪಡಿಸಿದ್ದಾರೆ. ಹಣಕ್ಕಾಗಿ ತನ್ನ ಮಗನನ್ನು ಸಂಬಂಧಿಕರೇ ಹತ್ಯೆ ಮಾಡಿದ್ದಾರೆ ಎಂದು ಬಾಲಕನ ತಂದೆ ಆರೋಪಿಸಿದ್ದಾರೆ.
Disclaimer:
www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.