ದಾಳಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಇಬ್ಬರು ಒಳನುಸುಳುಕೋರರನ್ನು ಹೊಡೆದುರುಳಿಸಿದ ಸೇನೆ

ಜಮ್ಮು ಕಾಶ್ಮೀರದಲ್ಲಿರುವ ನಿಯಂತ್ರಣ ರೇಖೆ (ಎಲ್ಒಸಿ) ಯೊಳಗೆ ನುಸುಳಲು ಪ್ರಯತ್ನಿಸುತ್ತಿದ್ದ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ ಎಂದು ಭಾರತೀಯ ಸೇನೆ ವರದಿ ಮಾಡಿದೆ. ಜಮ್ಮು ಮತ್ತು ಕಾಶ್ಮೀರ ಪೊಲೀಸರೊಂದಿಗೆ ಸೇರಿಕೊಂಡು, ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿ ಪ್ರದೇಶದಲ್ಲಿ ಶಸ್ತ್ರಸಜ್ಜಿತ ಭಯೋತ್ಪಾದಕರ ಪ್ರಮುಖ ಒಳನುಸುಳುವಿಕೆ ಪ್ರಯತ್ನವನ್ನು ಸೇನೆಯು ವಿಫಲಗೊಳಿಸಿತು.
ಬಾರಾಮುಲ್ಲಾದ ಉರಿ ಸೆಕ್ಟರ್ನಲ್ಲಿ ಭದ್ರತಾ ಪಡೆಗಳು ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿವೆ ಎಂದು ಶ್ರೀನಗರದಲ್ಲಿ ರಕ್ಷಣಾ ವಕ್ತಾರರು ತಿಳಿಸಿದ್ದಾರೆ. ನಿಯಂತ್ರಣ ರೇಖೆಯ ಉದ್ದಕ್ಕೂ ಭಾರಿ ಶಸ್ತ್ರಸಜ್ಜಿತ ಭಯೋತ್ಪಾದಕರನ್ನು ಉರಿ ಸೆಕ್ಟರ್ ನಲ್ಲಿ ಗುಪ್ತಚರ ಸಂಸ್ಥೆಗಳು ಮತ್ತು ಜೆ &ಕೆ ಪೊಲೀಸರ ನಿರ್ದಿಷ್ಟ ಮಾಹಿತಿಯ ಆಧಾರದ ಎದುರಿಸಲಾಯಿತು.
“ನಿರಂತರ ಮಳೆ ಮತ್ತು ಕೆಟ್ಟ ಹವಾಮಾನದ ಲಾಭವನ್ನು ಪಡೆದುಕೊಂಡು ಸಶಸ್ತ್ರ ಭಯೋತ್ಪಾದಕರ ಗುಂಪೊಂದು ನಿಯಂತ್ರಣ ರೇಖೆಯ ಉದ್ದಕ್ಕೂ ಒಳನುಸುಳಲು ಪ್ರಯತ್ನಿಸಿತು. ಮಧ್ಯಾಹ್ನ 3 ಗಂಟೆ ಸುಮಾರಿಗೆ ಆ ಗುಂಪನ್ನು ಜಾಗೃತ ಪಡೆಗಳು ತಡೆದವು. ಇದರ ಪರಿಣಾಮವಾಗಿ ಭಾರಿ ಗುಂಡಿನ ಚಕಮಕಿ ನಡೆಯಿತು” ಎಂದು ಸೇನಾಧಿಕಾರಿ ಹೇಳಿದರು. ಕೊನೆಯ ಬೆಳಕಿನವರೆಗೂ ತೀವ್ರವಾದ ಗುಂಡಿನ ಚಕಮಕಿ ಮುಂದುವರಿಯಿತು. ಇದರ ಪರಿಣಾಮವಾಗಿ ಇಬ್ಬರು ಭಯೋತ್ಪಾದಕರನ್ನು ಕೊಲ್ಲಲಾಯಿತು.