ಬಿಜೆಪಿ ರಥಯಾತ್ರೆಗೆ ಜೆ.ಪಿ.ನಡ್ಡ ಚಾಲನೆ: ಅಸಮಾಧಾನದಿಂದ ಸಚಿವ ಸೋಮಣ್ಣ ಗೈರು!? - Mahanayaka

ಬಿಜೆಪಿ ರಥಯಾತ್ರೆಗೆ ಜೆ.ಪಿ.ನಡ್ಡ ಚಾಲನೆ: ಅಸಮಾಧಾನದಿಂದ ಸಚಿವ ಸೋಮಣ್ಣ ಗೈರು!?

bjp chamarajanagara
01/03/2023

ಚಾಮರಾಜನಗರ: ಚುನಾವಣಾ ಸಮೀಪದಲ್ಲಿ ಬಿಜೆಪಿ ಆರಂಭಿಸಿರುವ ಬಿಜೆಪಿ ಸಂಕಲ್ಪ ಯಾತ್ರೆಗೆ ಇಂದು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡ ಚಾಲನೆ ಕೊಟ್ಟರು.

ಹೆಲಿಕಾಪ್ಟರ್ ಮೂಲಕ ಮಾದಪ್ಪನ ಬೆಟ್ಟಕ್ಕೆ ಬಂದಿಳಿದ ಜೆ.ಪಿ.ನಡ್ಡ ಅವರಿಗೆ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ಸುನೀಲ್ ಕುಮಾರ್, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ,  ಸಾಥ್ ಕೊಟ್ಟರು.

ಸಚಿವ ಸೋಮಣ್ಣ ಗೈರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಬಂದರೂ ಜೊತೆಗೆ ಯಾತ್ರೆಯ ಈಶ್ವರಪ್ಪ ತಂಡದಲ್ಲಿದ್ದರೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಸೋಮಣ್ಣ ಗೈರಾಗಿದ್ದು ಬಿಜೆಪಿಯಲ್ಲಿನ ಭಿನ್ನಮತ, ಅಸಮಾಧಾನಕ್ಕೆ ಕನ್ನಡಿ ಹಿಡಿದಿದೆ.

ಬೊಮ್ಮಾಯಿ ಅವರು ಅನುದಾನ ಕೊಟ್ಟಿಲ್ಲ ಜೊತೆಗೆ ಬೇರೆ ಬೇರೆ ಕಾರಣಗಳಿಂದ ಪಕ್ಷದ ವಿರುದ್ಧ ಸೋಮಣ್ಣ ಅಂತರ ಕಾಯ್ದುಕೊಂಡಿದ್ದಾರೆ ಎನ್ನಲಾಗಿದೆ.

ವಿಶೇಷ ಪೂಜೆ: ಜೆ‌.ಪಿ‌.ನಡ್ಡ ಅವರು ಮಲೆ ಮಹದೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿ ನಗಾರಿ ಬಾರಿಸುವ ಮೂಲಕ ಯಾತ್ರೆಗೆ ಚಾಲನೆ ಕೊಟ್ಟರು.

ಯಾತ್ರೆಗೆ ಚಾಲನೆ ಸಿಕ್ಕ ಬಳಿಕ ಸಿಎಂ ಬೊಮ್ಮಾಯಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಇಂದಿನ ರಥಯಾತ್ರೆ ದಿಗ್ವಿಜಯದ ಯಾತ್ರೆ ಎಂದು ಬಣ್ಣಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

Disclaimer:

www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.

ಇತ್ತೀಚಿನ ಸುದ್ದಿ