ಕಳಸ: ವಿದ್ಯಾರ್ಥಿಗಳು ಶಾಲೆಗೆ ತೆರಳಿದ ಬಳಿಕ ರಜೆ ಘೋಷಣೆ: ವಿದ್ಯಾರ್ಥಿಗಳು ಮನೆಗೆ ವಾಪಸ್

kalasa
28/06/2024

ಚಿಕ್ಕಮಗಳೂರು : ಮಲೆನಾಡಲ್ಲಿ ಮುಂದುವರೆದ ಗಾಳಿ–ಮಳೆ ಅಬ್ಬರ ಹಿನ್ನೆಲೆ ಕಳಸ ತಾಲೂಕಿನ ಶಾಲೆ ಅಂಗನವಾಡಿಗೆ ರಜಾ ಘೋಷಣೆ ಮಾಡಲಾಗಿದೆ.

ಪ್ರೌಢ ಹಾಗೂ ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಶಾಲೆಗೆ ರಜೆ ಘೋಷಣೆ ಹಿನ್ನೆಲೆ ಶಾಲೆಗೆ ತೆರಳಿದ್ದ ವಿದ್ಯಾರ್ಥಿಗಳು ವಾಪಸ್ ಮನೆಯತ್ತ ನಡೆಯುತ್ತಿದ್ದಾರೆ.

ಜೋರಾಗಿ ಮಳೆ ಸುರಿಯುತ್ತಿದ್ದರೂ ಅಧಿಕಾರಿಗಳ ತಡವಾಗಿ ರಜೆ ಘೋಷಣೆ ಮಾಡಿದ್ದಾರೆ. ಇದರಿಂದಾಗಿ ಶಾಲೆಗೆ ಹೋದ ವಿದ್ಯಾರ್ಥಿಗಳು ಮತ್ತೆ ಮನೆಯತ್ತ ಮರಳುವಂತಾಗಿದೆ.

ರಾತ್ರಿಯಿಂದಲೇ ಮಳೆಯಾದರೂ ಇಂದು ಬೆಳಗ್ಗೆ ತಡವಾಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಳಸ ತಹಸೀಲ್ದಾರ್ ಇದೀಗ ಶಾಲೆಗಳಿಗೆ ರಜೆ ಘೋಷಿಸಿದ ಹಿನ್ನೆಲೆ ಶಾಲೆಗೆ ತೆರಳಿದ್ದ ವಿದ್ಯಾರ್ಥಿಗಳು ಮನೆಯತ್ತ ವಾಪಸ್ ಬರುತ್ತಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ

Exit mobile version