ಇಂದು ಹೊಸ ರಾಷ್ಟ್ರೀಯ ಪಕ್ಷ ಘೋಷಿಸಲಿರುವ ತೆಲಂಗಾಣ ಸಿಎಂ ಕೆಸಿಆರ್ - Mahanayaka

ಇಂದು ಹೊಸ ರಾಷ್ಟ್ರೀಯ ಪಕ್ಷ ಘೋಷಿಸಲಿರುವ ತೆಲಂಗಾಣ ಸಿಎಂ ಕೆಸಿಆರ್

kcr
05/10/2022

ಹೈದರಾಬಾದ್:  ತೆಲಂಗಾಣದ ಮುಖ್ಯಮಂತ್ರಿ, ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್ ಎಸ್) ಅಧ್ಯಕ್ಷ ಕೆ.ಚಂದ್ರಶೇಖರ್ ರಾವ್  ಇಂದು ಹೊಸ ರಾಷ್ಟ್ರೀಯ ಪಕ್ಷವನ್ನು ಘೋಷಿಸಲಿದ್ದಾರೆ.

ಇಂದು(ಅ.5) ಮಧ್ಯಾಹ್ನ 1:19 ಗಂಟೆಗೆ ಅವರು ತಮ್ಮ ಹೊಸ ರಾಷ್ಟ್ರೀಯ ಪಕ್ಷದ ಹೆಸರನ್ನು ಘೋಷಣೆ ಮಾಡಲಿದ್ದಾರೆ. ಇದಕ್ಕಾಗಿ ಬೃಹತ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

2024ರ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಈಗಿನಿಂದಲೇ ಭರ್ಜರಿ ಸಿದ್ಧತೆ ನಡೆಯುತ್ತಿದ್ದು, ಇಂದು ತಮ್ಮ ಹೊಸ ಪಕ್ಷವನ್ನು ಘೋಷಿಸಿ ಅದರ ಅಜೆಂಡಾವನ್ನು ಕೆಸಿಆರ್ ತಿಳಿಸಲಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ