ಕೇಂದ್ರದ ವಿರುದ್ಧ ರೈತರು ಹಲ್ಲು ಕಚ್ಚಿ, ಮುಷ್ಟಿ ಎತ್ತಿ ಹೋರಾಡಿ | ತೆಲಂಗಾಣ ಸಿಎಂ ಚಂದ್ರಶೇಖರ್ ರಾವ್ ಕರೆ
ಹೈದರಾಬಾದ್: ಕೇಂದ್ರದ ವಿರುದ್ಧ ರೈತರು ಹಲ್ಲು ಕಚ್ಚಿ, ಮುಷ್ಟಿ ಎತ್ತಿ ಹೋರಾಡಬೇಕು ಎಂದು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಶನಿವಾರ ಕರೆ ನೀಡಿದರು.
ಜಂಗಾಂವ್ ಜಿಲ್ಲೆಯ ಕೊಡಕಂಡ್ಲದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ ರೈತರ ಬಗ್ಗೆ ಯಾವುದೇ ಪ್ರೀತಿ ಇಲ್ಲ. ಭಾರತದ ಆಹಾರ ನಿಗಮ(ಎಫ್ಸಿಐ), ಭತ್ತದ ರೈತರಿಗೆ ಕನಿಷ್ಠ ಬೆಂಬಲ ಬೆಲೆ(ಎಂಎಸ್ಪಿ)ಗಿಂತ ಹೆಚ್ಚಿನ ಮೊತ್ತವನ್ನು ಪಾವತಿಸಲು ರಾಜ್ಯ ಸರ್ಕಾರಗಳಿಗೆ ಅವಕಾಶ ನೀಡದ ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಹೋರಾಡ ಬೇಕು ಎಂದು ಹೇಳಿದರು.
ಭತ್ತವನ್ನು ಕ್ವಿಂಟಲ್ಗೆ 1,888 ರೂ.ಗೆ ಖರೀದಿಸಬೇಕು ಎಂದು ಎಫ್ಸಿಐ ಅತ್ಯಂತ ಸ್ಪಷ್ಟವಾಗಿ ಹೇಳಿದೆ. ಕೇಂದ್ರ ಸರ್ಕಾರಕ್ಕೆ ರೈತರ ಬಗ್ಗೆ ಯಾವುದೇ ಕಾಳಜಿ ಇಲ್ಲ. ಮೋದಿ ಸರ್ಕಾರದ ವಿರುದ್ಧ ರೈತರು ಹಲ್ಲು ಕಚ್ಚಿ, ಮುಷ್ಟಿ ಎತ್ತಿ ಹೋರಾಟ ನಡೆಸಬೇಕು ಎಂದು ಅವರು ಹೇಳಿದರು.
Disclaimer:
www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.