ದೋಣಿಯಲ್ಲಿ ಕಾಂಗ್ರೆಸ್ ವಿನೂತನ ಪ್ರತಿಭಟನೆ: ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ - Mahanayaka

ದೋಣಿಯಲ್ಲಿ ಕಾಂಗ್ರೆಸ್ ವಿನೂತನ ಪ್ರತಿಭಟನೆ: ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ

09/03/2025

ಕೇರಳದ ಅಲಪ್ಪುಳ ಜಿಲ್ಲೆಯ ಕರಾವಳಿಯಲ್ಲಿ ಆಳ ಸಮುದ್ರ ಗಣಿಗಾರಿಕೆಗೆ ಅನುಮತಿ ನೀಡುವ ಕೇಂದ್ರದ ನಿರ್ಧಾರವನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷವು ಅಲಪ್ಪುಳ ಜಿಲ್ಲೆಯ ಕರಾವಳಿಯ ಆಳ ಸಮುದ್ರದಲ್ಲಿ ಪ್ರತಿಭಟನೆ ನಡೆಸಿತು.


Provided by

ಅಲಪ್ಪುಳ ಸಂಸದ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮೀನುಗಾರರು, ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.

ಪ್ರತಿಭಟನಾಕಾರರು 15 ನಾಟಿಕಲ್ ಮೈಲುಗಳಷ್ಟು ಸಮುದ್ರಕ್ಕೆ ಇಳಿದು ಕೇಂದ್ರದ ಕ್ರಮದ ವಿರುದ್ಧ ಘೋಷಣೆಗಳನ್ನು ಕೂಗಿದರು. ಕೇರಳದ ಕರಾವಳಿ ಜಿಲ್ಲೆಗಳಾದ್ಯಂತ ಸಾವಿರಾರು ಮೀನುಗಾರರ ಜೀವನೋಪಾಯದ ಮೇಲೆ ತೀವ್ರ ಪರಿಣಾಮ ಬೀರುತ್ತದೆ ಎಂದು ವೇಣುಗೋಪಾಲ್ ಈ ಪ್ರಸ್ತಾಪವನ್ನು ಸರ್ಕಾರ ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು. ಆಳ ಸಮುದ್ರ ಗಣಿಗಾರಿಕೆಯ ದುಷ್ಪರಿಣಾಮಗಳ ಬಗ್ಗೆ ಸ್ಥಳೀಯ ಸಮುದಾಯಗಳು ಮತ್ತು ಸಂಸದರು ಪದೇ ಪದೇ ಎತ್ತಿದ ಕಳವಳಗಳನ್ನು ಕೇಂದ್ರವು ನಿರ್ಲಕ್ಷಿಸಿದೆ ಎಂದು ಅವರು ಆರೋಪಿಸಿದರು.


Provided by

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ