10:48 AM Saturday 10 - January 2026

ಹೀಗೂ ಇರ್ತಾರ: ಏರ್ ಇಂಡಿಯಾ ವಿಮಾನದಿಂದ ಜಿಗಿಯುವುದಾಗಿ ಬೆದರಿಕೆ ಹಾಕಿದ ವ್ಯಕ್ತಿ..!

12/05/2024

ದುಬೈನಿಂದ ಮಂಗಳೂರಿಗೆ ಹೋಗುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿದ ಕೇರಳ ಮೂಲದ ವ್ಯಕ್ತಿಯನ್ನು ಬಂಧಿಸಲಾಗಿದೆ. ಆ ವ್ಯಕ್ತಿ ವಿಮಾನದಿಂದ ಜಿಗಿಯುವುದಾಗಿ ಬೆದರಿಕೆ ಹಾಕಿದ್ದಾನೆ.

ಏರ್ ಇಂಡಿಯಾ ಎಕ್ಸ್ ಪ್ರೆಸ್ ನ ಭದ್ರತಾ ಸಂಯೋಜಕ ಸಿದ್ಧಾರ್ಥ ದಾಸ್ ಅವರು ಪ್ರಯಾಣಿಕನ ವಿರುದ್ಧ ದೂರು ದಾಖಲಿಸಿದ್ದು, ವಿಮಾನವು ಮಂಗಳೂರಿಗೆ ಬಂದಿಳಿದ ನಂತರ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿಗೆ ಸಿಕ್ಕಿಬಿದ್ದಿದ್ದಾರೆ. ನಂತರ ಆತನನ್ನು ಪೊಲೀಸರಿಗೆ ಒಪ್ಪಿಸಲಾಯಿತು.

ಮೇ 8ರಂದು ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಕೇರಳದ ಕಣ್ಣೂರು ಮೂಲದ ಮುಹಮ್ಮದ್ ಬಿ.ಸಿ ಎಂಬವರು ಪ್ರಯಾಣಿಸುತ್ತಿದ್ದರು. ಅವರು ಅಶಿಸ್ತಿನ ರೀತಿಯಲ್ಲಿ ವರ್ತಿಸಿದ್ದಾರೆ. ಅಲ್ಲದೇ ವಿಮಾನದ ಸಮಯದಲ್ಲಿ ತೊಂದರೆಗಳನ್ನು ಸೃಷ್ಟಿಸಿದ್ದಾರೆ. ಸಿಬ್ಬಂದಿ ಮತ್ತು ಸಹ ಪ್ರಯಾಣಿಕರಿಗೆ ಅನಾನುಕೂಲತೆಯನ್ನುಂಟು ಮಾಡಿದರು ಎಂದು ಆರೋಪಿಸಲಾಗಿದೆ. ವಿಮಾನದಿಂದ ಸಮುದ್ರಕ್ಕೆ ಜಿಗಿಯುವುದಾಗಿ ಬೆದರಿಕೆ ಹಾಕಿದ್ದರಿಂದ ಅವರ ಕ್ರಮಗಳು ಇತರರಿಗೆ ಅಪಾಯವನ್ನುಂಟುಮಾಡಿದವು” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ವಿಮಾನವು ಮಂಗಳೂರಿನಲ್ಲಿ ಇಳಿದ ನಂತರ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಆತನನ್ನು ಬಂಧಿಸಿ ಬಜ್ಪೆ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ. ನಂತರ ಪ್ರಕರಣ ದಾಖಲಿಸಿ ಅವನನ್ನು ಬಂಧಿಸಲಾಗಿದೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version