ಕೋಟೆಕಾರು ಬ್ಯಾಂಕ್ ಲೂಟಿ: ದರೋಡೆ ಪ್ಲಾನ್ ಮಾಡಿದ ಸ್ಥಳೀಯರಿಗೆ ರಾಜಕೀಯ ಬೆಂಬಲ: ಶಾಸಕ ಭರತ್ ಶೆಟ್ಟಿ ಆರೋಪ - Mahanayaka
12:52 PM Saturday 12 - September 2026

ಕೋಟೆಕಾರು ಬ್ಯಾಂಕ್ ಲೂಟಿ: ದರೋಡೆ ಪ್ಲಾನ್ ಮಾಡಿದ ಸ್ಥಳೀಯರಿಗೆ ರಾಜಕೀಯ ಬೆಂಬಲ: ಶಾಸಕ ಭರತ್ ಶೆಟ್ಟಿ ಆರೋಪ

kotekar
23/01/2025

ಮಂಗಳೂರು: ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆಯಲ್ಲಿ ಸ್ಥಳೀಯರ ಕೈವಾಡವಿದ್ದು, ಇದನ್ನು ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ. ದರೋಡೆಕೋರರಿಗೆ ರಾಜಕೀಯ ಬೆಂಬಲವಿದೆ ಎಂದು ಬಿಜೆಪಿ ಶಾಸಕ ಭರತ್ ಶೆಟ್ಟಿ ಗಂಭೀರ ಆರೋಪ ಮಾಡಿದ್ದಾರೆ.

ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ದರೋಡೆಯಲ್ಲಿ ಶಾಮೀಲಾದ ಸ್ಥಳೀಯರಿಗೆ ರಾಜಕೀಯ ಬೆಂಬಲವಿದೆ. ದರೋಡೆ ಪ್ರಕರಣದಲ್ಲಿ ಸ್ಥಳೀಯರು ಇರುವ ಬಗ್ಗೆ ಶೇ.100ರಷ್ಟು ನಮಗೆ ಮಾಹಿತಿ ಇದೆ ಎಂದು ಅವರು ಹೇಳಿದರು.

ದರೋಡೆಕೋರರನ್ನು ಬಂಧಿಸಲಾಗಿದೆ. ಆದರೆ ಪ್ಲಾನಿಂಗ್ ಮಾಡಿದವರನ್ನು ಕುಮ್ಮಕ್ಕು ನೀಡಿದವರನ್ನು ಯಾರೋ ಬಚಾವ್ ಮಾಡುತ್ತಿದ್ದಾರೆ ಎಂದು ಅವರು ದೂರಿದ್ದಾರೆ. ನೈಜ ಆರೋಪಿಗಳನ್ನು ಬಯಲಿಗೆ ತರುವಂತೆ ಅವರು ಒತ್ತಾಯ ಮಾಡಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/HEkqDgrW2BlJLad5kZ1DX7

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti deneme bonusu veren siteler deneme bonusu veren siteler