ಕೆಸವಳಲು ಕೂಡಿಗೆ: ಕಣ್ ದೃಷ್ಟಿ ತೆಗೆಯುವ ವಿಶೇಷ ನಂಬಿಕೆ

ಮೂಡಿಗೆರೆ: ತಾಲ್ಲೂಕಿನ ಜೊಗಣಕೆರೆ ಗ್ರಾಮದ ಕೆಸವಳಲು ಕೂಡಿಗೆಗೆ ದಕ್ಷಿಣ ಕರ್ನಾಟಕದ ಹೆಚ್ಚಿನ ಜನ ಬರುತ್ತಾರೆ. ಇದು ಕೆಸವಳಲು ಮತ್ತು ಅಬಚೂರು- ಹಾಲೂರು ಮಧ್ಯ ಭಾಗದಲ್ಲಿ ಸೇರುವ ಹೇಮಾವತಿ ಮತ್ತು ಜಪವಾತಿ ನದಿ ಸೇರುವ ಸ್ಥಳಕ್ಕೆ ಕೂಡಿಗೆ ಅನ್ನುತ್ತಾರೆ . ಇಲ್ಲಿ ರಾಮ ದೇವಸ್ಥಾನ ಇದೇ ಹಾಗೆ ನದಿಗಳು ಸೇರುವ ಜಾಗದಲ್ಲಿ ಆಸ್ರಕೊಂಡ ಇದೆ. ಅದೇ ರೀತಿ ಅನಾದಿಕಾಲದಿಂದಲೂ ಕಣ್ಣು ದೃಷ್ಟಿ ತೆಗೆಯುವ ಸಂಪ್ರದಾಯವಿದೆ.
ಪ್ರತಿ ವರ್ಷದಲ್ಲಿ ಒಂದೆರಡು ಬಾರಿ ಇಲ್ಲಿಗೆ ಸರ್ವಧರ್ಮೀಯರೂ ಆಗಮಿಸುತ್ತಾರೆ. ತಮ್ಮ ಹೊಸ ವಾಹನಗಳಿಗೆ ವಿಶೇಷವಾಗಿ ದೃಷ್ಟಿ ಪೂಜೆ , ನವ ಜೋಡಿಗಳಿಗೆ ಬಾಸಿಂಗ ಪೂಜೆ, ಮನೆಯ ಹಾಗೂ ತೋಟದ ಮಣ್ಣು ತಂದು ದೃಷ್ಟಿ ಪೂಜೆ ಮಾಡುತ್ತಾರೆ. ಗದ್ದೆ ಹಸಿರು ಫಲ ಕಟಾವು ಮಾಡುವ ಮೊದಲು ಪೂಜೆ ಮಾಡಿಸಿದರೆ ಉತ್ತಮ ಎಂದು ಜನರು ನಂಬಿದ್ದಾರೆ.
ಸಾವಿರಾರು ಜನರು ಇಲ್ಲಿಗೆ ಆಗಮಿಸುತ್ತಾರೆ. ಆದರೆ ಇಲ್ಲಿಗೆ ಆಗಮಿಸುವ ಪ್ರವಾಸಿಗರಿಗೆ ಸೂಕ್ತವಾದ ಮೂಲಭೂತ ಸೌಕರ್ಯಗಳು ಇಲ್ಲವಾಗಿದೆ. ಶೌಚಾಲಯ ವ್ಯವಸ್ಥೆ ಇಲ್ಲ , ಕ್ಯಾಂಟಿನ್, ಕುಡಿಯುವ ನೀರಿನ ವ್ಯವಸ್ಥೆ ಇಲ್ಲವಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
Disclaimer:
www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.