ಅಲ್ಪಸಂಖ್ಯಾತರನ್ನು ರಾಜಕೀಯವಾಗಿ ಮುಗಿಸುವುದೇ ಕುಮಾರಸ್ವಾಮಿಯ ಗುರಿ: ಜಮೀರ್ ಆರೋಪ - Mahanayaka
12:52 AM Friday 11 - September 2026

ಅಲ್ಪಸಂಖ್ಯಾತರನ್ನು ರಾಜಕೀಯವಾಗಿ ಮುಗಿಸುವುದೇ ಕುಮಾರಸ್ವಾಮಿಯ ಗುರಿ: ಜಮೀರ್ ಆರೋಪ

jameer
24/10/2021

ವಿಜಯಪುರ:  ಸಿದ್ದರಾಮಯ್ಯನವರನ್ನು ಅಲ್ಪಸಂಖ್ಯಾತ ವಿರೋಧಿ ಎಂದು ಟೀಕಿಸುವ  ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ನಿಜವಾದ ಅಲ್ಪಸಂಖ್ಯಾತ ವಿರೋಧಿಯಾಗಿದ್ದು,  ಅಲ್ಪಸಂಖ್ಯಾತರನ್ನು ರಾಜಕೀಯವಾಗಿ ಮುಗಿಸುವುದೇ ಅವರ ಗುರಿ ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಆರೋಪಿಸಿದ್ದಾರೆ.

ಸಿಂದಗಿ ವಿಧಾನಸಭಾ ಚುನಾವಣೆ ಪ್ರಚಾರದ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಹೆಚ್.ಡಿ.ದೇವೇಗೌಡರು ಅಲ್ಪಸಂಖ್ಯಾತ ವಿರೋಧಿ ಅಲ್ಲ,  ಕುಮಾರಸ್ವಾಮಿ ಅಲ್ಪಸಂಖ್ಯಾತರನ್ನು ರಾಜಕೀಯವಾಗಿ ಬಲಿ ಕೊಡುವ ಕೆಲಸ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.

ಚುನಾವಣೆ ಸಂದರ್ಭದಲ್ಲಿ ಕುಮಾರಸ್ವಾಮಿ ಅವರಿಗೆ ಏಕಾಏಕಿ ಅಲ್ಪಸಂಖ್ಯಾತರ ಮೇಲೆ  ಪ್ರೀತಿ ಉಕ್ಕುತ್ತಿದೆ. ಅಲ್ಪಸಂಖ್ಯಾತರ ಮತ ವಿಭಜನೆಗಾಗಿ ಉಪ ಚುನಾವಣೆಯಲ್ಲಿ ಸಿಂದಗಿ, ಹಾನಗಲ್ ಕ್ಷೇತ್ರಗಳಲ್ಲಿ ಮುಸ್ಲಿಮ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ರಾಜಕೀಯವಾಗಿ ಬಲಿಕೊಡುವ ಕೆಲಸ ಮಾಡುತ್ತಿದ್ದಾರೆ ಎಂದು ಅವರು ಟೀಕಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DvHWsFS1hwLKfIX9njyNyb

ಇನ್ನಷ್ಟು ಸುದ್ದಿಗಳು…

ಫೋಟೋ ಹಾಕಿಲ್ಲ ಅಂತ, ಸಿದ್ದರಾಮಯ್ಯ ಕಾರ್ಯಕ್ರಮಕ್ಕೇ ಬಂದಿಲ್ಲ, ಇನ್ನು ಸಿಎಂ ಸ್ಥಾನ ಬಿಡ್ತಾರಾ? | ಕುಮಾರಸ್ವಾಮಿ ಪ್ರಶ್ನೆ

ತೈಲ ಬೆಲೆ ಏರಿಕೆಯ ಬಳಿಕ ಮತ್ತೊಂದು ಶಾಕ್: ಬೆಂಕಿ ಪೊಟ್ಟಣದ ಬೆಲೆಯೂ ಏರಿಕೆ!

ರಾಜ್ಯ ಖಾಸಗಿ ಶಿಕ್ಷಕರ ಬಳಗದ ಸಂಸ್ಥಾಪಕ ಸಿ.ಎನ್.ನಾಗೇಶ್ ಅವರಿಗೆ ಹುಟ್ಟುಹಬ್ಬದ ಶುಭ ಹಾರೈಕೆ

ಬೆಲೆ ಏರಿಕೆ ಬೆನ್ನಲ್ಲೇ ಗುಜರಿ ಅಂಗಡಿಯಲ್ಲಿ ರಾಶಿ ರಾಶಿ ಗ್ಯಾಸ್ ಸಿಲಿಂಡರ್ ಗಳು!

ನಟ ವಿವೇಕ್ ಸಾವಿಗೆ ಕೊವಿಡ್ ಲಸಿಕೆ ಕಾರಣವೇ? ಸರ್ಕಾರ ನೀಡಿದ ಅಂತಿಮ ವರದಿಯೇನು?

“ರತ್ನನ್ ಪ್ರಪಂಚ” ವರ್ಣಿಸಲು ಪದಗಳೇ ಇಲ್ಲ | ಒಂದು ಒಳ್ಳೆಯ ಸಿನಿಮಾ ನೋಡಿದೆ: ಹಾಸನದ ಯುವಕ ಸಚಿನ್ ಸರಗೂರು

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti deneme bonusu veren siteler deneme bonusu veren siteler