ಕುವೈತ್ ಕಟ್ಟಡದಲ್ಲಿ ಅಗ್ನಿ ಅವಘಡ: ಕುವೈತ್ ಗೆ ತೆರಳಿದ ರಾಜ್ಯ ಸಚಿವ ಕೀರ್ತಿವರ್ಧನ್ ಸಿಂಗ್ - Mahanayaka
5:32 PM Saturday 25 - October 2025

ಕುವೈತ್ ಕಟ್ಟಡದಲ್ಲಿ ಅಗ್ನಿ ಅವಘಡ: ಕುವೈತ್ ಗೆ ತೆರಳಿದ ರಾಜ್ಯ ಸಚಿವ ಕೀರ್ತಿವರ್ಧನ್ ಸಿಂಗ್

13/06/2024

ಕುವೈತ್ ನಲ್ಲಿ ವಿದೇಶಿ ಕಾರ್ಮಿಕರು ವಾಸಿಸುತ್ತಿದ್ದ ಕಟ್ಟಡದಲ್ಲಿ ಬುಧವಾರ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ 41 ಭಾರತೀಯರು ಸಾವನ್ನಪ್ಪಿದ್ದಾರೆ. ಘಟನೆಯ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ವಿದೇಶಾಂಗ ಸಚಿವಾಲಯ ಮತ್ತು ಸಂಬಂಧಪಟ್ಟ ಇತರ ಸಚಿವರ ತಂಡದೊಂದಿಗೆ ಕಳೆದ ರಾತ್ರಿ ಉನ್ನತ ಸಭೆ ಕರೆದರು. ಅಗ್ನಿ ದುರಂತದಿಂದ ಬಾಧಿತರಾದ ಭಾರತೀಯರಿಗೆ ಸಹಾಯವನ್ನು ಖಚಿತಪಡಿಸಿಕೊಳ್ಳಲು ಮತ್ತು ಪರಿಸ್ಥಿತಿಯನ್ನು ಅವಲೋಕಿಸಲು ಕೇಂದ್ರ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್ ಇಂದು ಕುವೈತ್ ಗೆ ಪ್ರಯಾಣಿಸಿದ್ದಾರೆ.

ಬೆಂಕಿ ಅವಘಡದಲ್ಲಿ ಮೃತಪಟ್ಟವರನ್ನು ಸ್ವದೇಶಕ್ಕೆ ಕಳುಹಿಸುವುದನ್ನು ಖಚಿತಪಡಿಸಿಕೊಳ್ಳಲು ಕುವೈತ್ ಗೆ ತೆರಳುವ ಮೊದಲು, ಕೆಲವು ಶವಗಳು ಗುರುತಿಸಲಾಗದಷ್ಟು ಸುಟ್ಟುಹೋಗಿವೆ ಎಂದು ಸಿಂಗ್ ಹೇಳಿದ್ದಾರೆ.
ಕುವೈತ್ ಗೆ ತೆರಳುವ ಮೊದಲು ದೆಹಲಿ ವಿಮಾನ ನಿಲ್ದಾಣದಲ್ಲಿ ಎಎನ್ಐ ಜೊತೆ ಮಾತನಾಡಿದ ರಾಜ್ಯ ಸಚಿವರು, “ನಾವು ನಿನ್ನೆ ಸಂಜೆ ಪ್ರಧಾನಿಯೊಂದಿಗೆ ಸಭೆ ನಡೆಸಿದ್ದೇವೆ. ನಾವು ಅಲ್ಲಿಗೆ ತಲುಪಿದ ಕ್ಷಣವೇ ಉಳಿದ ಪರಿಸ್ಥಿತಿ ಸ್ಪಷ್ಟವಾಗುತ್ತದೆ” ಎಂದಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ