ರಸ್ತೆ ಬದಿಯಲ್ಲೇ ದರ್ಶನ ನೀಡಿದ ಚಿರತೆ: ಗ್ರಾಮಸ್ಥರಿಗೆ ಆತಂಕ
ಜಯಪುರ: ಅತ್ತಿಕುಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೆತ್ತದಕೊಳಲು ಗ್ರಾಮದ ದೊಡ್ಡಬಿಳಾಲುವಿನಲ್ಲಿ ರಾತ್ರಿ 9 ಗಂಟೆ ಸುಮಾರಿಗೆ ವಾಹನದಲ್ಲಿ ಹೋಗುತ್ತಿದ್ದವರಿಗೆ ರಸ್ತೆ ಬದಿಯೇ ಚಿರತೆ ಕಂಡಿದ್ದು ಗ್ರಾಮಸ್ಥರಲ್ಲಿ ಆತಂಕವನ್ನುಂಟು ಮಾಡಿದೆ.
ರಾತ್ರಿ ಟಿಟಿ ವಾಹನದಲ್ಲಿ ಹೋಗುತ್ತಿದ್ದರಿಗೆ ಕಂಡಿದ್ದು ಅವರು ಮೊಬೈಲ್ ನಲ್ಲಿ ಚಿರತೆಯ ಪೋಟೋ ತೆಗೆದಿದ್ದು ಇದೀಗ ಎಲ್ಲೆಡೆ ಚಿರತೆಯ ಚಿತ್ರ ವೈರಲ್ ಆಗಿದೆ.
ಮೊದಲೇ ಹೊಂಡ ಗುಂಡಿ ಇರುವ ಈ ಗ್ರಾಮದ ರಸ್ತೆಯಲ್ಲಿ ಚಲಿಸುವುದೇ ದೊಡ್ಡ ಸವಾಲಾಗಿದ್ದು ಅದರಲ್ಲೂ ರಾತ್ರಿ ವೇಳೆ ಚಿರತೆ ಕಂಡಿದ್ದು ವಾಹನ ಸವಾರರು ವಾಹನ ಚಲಾಯಿಸಲು ಭಯ ಪಡುವ ಪರಿಸ್ಥಿತಿ ಎದುರಾಗಿದೆ. ಕೂಡಲೇ ಅರಣ್ಯ ಇಲಾಖೆ ಚಿರತೆಯನ್ನು ಹಿಡಿದು ಸ್ಥಳಾಂತರ ಮಾಡಬೇಕೆಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.

Provided by

Provided by

Provided by

Provided by

Provided by

Provided by

Provided by

Provided by

Provided by

Provided by

Provided by

Provided by
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD




























