ಕಬ್ಬಿನ ಗದ್ದೆಯಲ್ಲಿ ಚಿರತೆ ಮರಿಗಳು ಪತ್ತೆ - Mahanayaka
4:29 AM Saturday 6 - September 2025

ಕಬ್ಬಿನ ಗದ್ದೆಯಲ್ಲಿ ಚಿರತೆ ಮರಿಗಳು ಪತ್ತೆ

lakur
12/09/2023

ಚಾಮರಾಜನಗರ: ಕಬ್ಬಿನ ಗದ್ದೆಯಲ್ಲಿ ಕಾಣಿಸಿಕೊಂಡ ಚಿರತೆ ಮರಿಗಳನ್ನ ರಕ್ಷಣೆ ಮಾಡಿರುವ ಘಟನೆ ಗುಂಡ್ಲುಪೇಟೆ ತಾಲ್ಲೂಕು ಲಕ್ಕೂರು ಗ್ರಾಮದಲ್ಲಿ ನಡೆದಿದೆ.


Provided by

ಗುಂಡ್ಲುಪೇಟೆ ತಾಲ್ಲೂಕು ಲಕ್ಕೂರು ಗ್ರಾಮದ ಮಹದೇವಪ್ಪ ಎಂಬುವರ ತೋಟದಲ್ಲಿ ಕಬ್ಬು ಕಟಾವು ಮಾಡುವಾಗ ಚಿರತೆ ಮರಿಗಳು ಪ್ರತ್ಯಕ್ಷವಾಗಿವೆ.

ಸ್ಥಳಕ್ಕೆ ಗುಂಡ್ಲುಪೇಟೆ ಅರಣ್ಯಾಧಿಕಾರಿಗಳ ಭೇಟಿ ನೀಡಿದ್ದಾರೆ. ತಾಯಿ ಚಿರತೆ ಬರುವಿಕೆಗಾಗಿ ಅದೇ ಸ್ಥಳದಲ್ಲಿ ಅರಣ್ಯ ಸಿಬ್ಬಂದಿ ಕಾಯುತ್ತಿದ್ದಾರೆ. ಚಿರತೆ ಸಂಚಾರದಿಂದ ಈ ಭಾಗದ ರೈತರು ಭಯಭೀತರಾಗಿದ್ದಾರೆ.

ಇತ್ತೀಚಿನ ಸುದ್ದಿ