10:03 PM Tuesday 18 - November 2025

ಇಂದಿನಿಂದ ಕಮಲಪಡೆ ರಥಯಾತ್ರೆ: ಮಾದಪ್ಪನ ಬೆಟ್ಟದ ಜನರ ಸಮಸ್ಯೆಗೆ ನಡ್ಡ ಕೊಡ್ತಾರಾ ಮುಕ್ತಿ!?

01/03/2023

ಚಾಮರಾಜನಗರ:ಕಾಂಗ್ರೆಸ್ ನ ಪ್ರಜಾಧ್ವನಿ ಯಾತ್ರೆ ಬೆನ್ನಲ್ಲೇ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ನಡೆಸಲಿದ್ದು, ರಾಜ್ಯದ ದಕ್ಷಿಣ ತುಟ್ಟ ತುದಿ ಮಲೆಮಹದೇಶ್ವರ ಬೆಟ್ಟದಿಂದ ಇಂದು ಯಾತ್ರೆ ಆರಂಭವಾಗಲಿದೆ.

ಇಂದು ಪ್ರಮುಖ‌ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡ ಚಾಲನೆ ನೀಡಲಿದ್ದು ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ, ಸಚಿವರುಗಳು, ಸಂಸದರು ಸಾಥ್ ಕೊಡಲಿದ್ದಾರೆ.

ಸೋಲಿಗರೊಟ್ಟಿಗೆ ಸಂವಾದ, ರೋಡ್ ಶೋ, ಸಮಾವೇಶ: ಮಲೆ ಮಹದೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಲಿ ಯಾತ್ರೆಗೆ ನಡ್ಡ ಚಾಲನೆ ಕೊಡಲಿದ್ದಾರೆ.‌ ಬಳಿಕ, ಸೋಲಿಗರು ಹಾಗೂ ಬೇಡಗಂಪಣ ಜನಾಂಗದವರೊಂದಿವೆ ಸಂವಾದ ನಡೆಯಲಿದ್ದು ಅದಾದ ನಂತರ ಸಾಲೂರು ಮಠಕ್ಕೆ ಭೇಟಿ ಕೊಡಲಿದ್ದಾರೆ.

ಮಧ್ಯಾಹ್ನ 2 ರ ವೇಳೆಗೆ ರಾಜ್ಯ ನಾಯಕರು ಹನೂರಿನಲ್ಲಿ ಬಹಿರಂಗ ಸಮಾವೇಶ ನಡೆಸಿ ಬಳಿಕ ಕೊಳ್ಳೇಗಾಲದಲ್ಲಿ ರೋಡ್ ಶೋ‌ ಹಾಗೂ ಬಹಿರಂಗ ಸಮಾವೇಶ ನಡೆಯಲಿದೆ.

ಚಾಮರಾಜನಗರದಲ್ಲಿ ಮಾ.2 ರಂದು ನಗರದ ಆದಿಶಕ್ತಿ ದೇವಸ್ಥಾನದಿಂದ ಪ್ರಮುಖ ಬೀದಿಗಳಲ್ಲಿ ರೋಡ್ ಶೋ ನಡೆಯಲಿದ್ದು ಮಧ್ಯಾಹ್ನ ಗುಂಡ್ಲುಪೇಟೆಯಲ್ಲಿ ಬೃಹತ್ ಸಮಾವೇಶ ನಡೆಯಲಿದೆ.

ರಾಜ್ಯದಲ್ಲಿ 4 ತಂಡಗಳು ಯಾತ್ರೆ ನಡೆಸಲಿದ್ದು ಗಡಿಜಿಲ್ಲೆಯಲ್ಲೇ ಮೊದಲ ಯಾತ್ರೆ ನಡೆಯಲಿರುವುದು ವಿಶೇಷ. ಇನ್ನು, ಈಗಾಗಲೇ ಸಮಾವೇಶ ಸ್ಥಳಗಳಲ್ಲಿ ಬಿಜೆಪಿ ಪಡೆ ಸಕಲ ತಯಾರಿ ನಡೆಸುತ್ತಿದೆ.

ಸಮಸ್ಯೆಗೆ ಕೊಡ್ತಾರಾ ಮುಕ್ತಿ : ರಥಯಾತ್ರೆಗೆ ಚಾಲನೆ ಕೊಟ್ಟ ಬಳಿಕ ಬೇಡಗಂಪಣ ಸಮುದಾಯ ಹಾಗೂ ಸೋಲಿಗ ಸಮಯದಾಯದೊಟ್ಟಿಗೆ ಜೆ.ಪಿ‌.ನಡ್ಡ ಸಂವಾದ ನಡೆಸಲಿದ್ದಾರೆ.

ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ಮಲೆಮಹದೇಶ್ವರ ಬೆಟ್ಟ ಗ್ರಾಪಂ ವ್ಯಾಪ್ತಿಗೆ ಒಳಪಡುವ ಪಾಲಾರ್, ಮೆದಗಣಾನೆ, ಪಡಿಸಲನತ್ತ, ಮೆಂದಾರೆ, ಇಂಡಿಗನತ್ತ, ತೊಳಸಿಕೆರೆ, ಕೊಕ್ಕೆಬೊರೆ, ತೋಕೆರೆ, ದೊಡ್ಡಾಣೆ ಗ್ರಾಮಗಳಲ್ಲಿ ಈಗಲೂ ವಿದ್ಯುತ್ ಸಂಪರ್ಕ ಇಲ್ಲದೇ ಸೋಲರ್ ದೀಪಗಳನ್ನು ಆಶ್ರಯಿಸಬೇಕಿದ್ದು ಆಗಾಗ್ಗೆ ಇದು ರಿಪೇರಿಗೆ ಬಂದು ತಿಂಗಳುಗಟ್ಟಲೇ ಬುಡ್ಡಿ ದೀಪಗಳೇ ಇವರಿಗೆ ಬೆಳಕಾಗಲಿದ್ದು ನಡ್ಡ ಸಂವಾದದಲ್ಲಿ ಇದು ಚರ್ಚೆಗೆ ಬರುವ ಸಾಧ್ಯತೆ ಇದೆ.

ಇನ್ನು,,ಮಲೆಮಹದೇಶ್ವರ ಬೆಟ್ಟದ ಬಹುಪಾಲು ಗ್ರಾಮಗಳಿಗೆ ರಸ್ತೆ ಸಂಪರ್ಕವಿಲ್ಲದೇ ವಾಹನ ಸೌಕರ್ಯ ಇಲ್ಲದಿರುವುದು ಇಲ್ಲಿನ ಜನರ ಬಲುದೊಡ್ಡ ಸಮಸ್ಯೆಯಾಗಿದ್ದು ಡೋಲಿ ಮೂಲಕ ರೋಗಿಗಳನ್ನು ಈಗಲೂ ಕೂಡ ಹೊತ್ತೊಯ್ತುವ ಪರಿಸ್ಥಿತಿ ಇದೆ.

ಇದರೊಟ್ಟಿಗೆ, ಬೇಡಗಂಪಣ ಸಮುದಾಯವನ್ನು ಎಸ್ ಟಿಗೆ ಸೇರಿಸಬೇಕೆಂಬ ಒತ್ತಾಯ, ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಬೇಕೆಂಬ ಕೂಗು ಇಂದು ನಡ್ಡ ಗಮನಕ್ಕೆ ತರಲಾಗುವುದು ಎಂದು ಸ್ಥಳೀಯರು ತಿಳಿಸಿದ್ದಾರೆ‌.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ನಡೆಸುವ ಸಂವಾದ ಕಾರ್ಯದ ಮೂಲಕ ಈಗಲಾದರೂ ಮಲೆಮಹದೇಶ್ವರ ಬೆಟ್ಟದ ಜನರ ಸಮಸ್ಯೆಗೆ ಮುಕ್ತಿ ಸಿಗುವುದೇ ಎಂಬುದನ್ನು ಕಾದು ನೋಡಬೇಕಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ

Exit mobile version