1:59 PM Saturday 12 - September 2026

ಇನ್ನಿಲ್ಲ: ಜ್ಞಾನಪೀಠ ಪ್ರಶಸ್ತಿ ವಿಜೇತ ಖ್ಯಾತ ಸಾಹಿತಿ ಎಂ.ಟಿ.ವಾಸುದೇವನ್ ನಾಯರ್ ನಿಧನ

26/12/2024

ಹೃದಯ ವೈಫಲ್ಯದಿಂದ ಕೊಝಿಕ್ಕೋಡ್ ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಲಯಾಳಂನ ಶ್ರೇಷ್ಠ ಸಾಹಿತಿ ಮತ್ತು ಜ್ಞಾನಪೀಠ ಪ್ರಶಸ್ತಿ ವಿಜೇತ ಎಂ.ಟಿ.ವಾಸುದೇವನ್ ನಾಯರ್ ಅವರು ನಿಧನರಾಗಿದ್ದಾರೆ.

ಅನಾರೋಗ್ಯದ ಕಾರಣ ಅವರು ಒಂದು ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿದ್ದರು. ಉಸಿರಾಟದ ತೊಂದರೆಯಿಂದಾಗಿ ಲೇಖಕರನ್ನು ಡಿಸೆಂಬರ್ 16 ರ ಮುಂಜಾನೆ ಆಸ್ಪತ್ರೆಗೆ ದಾಖಲಿಸಲಾಯಿತು.

ಅವರು ಬುಧವಾರ ರಾತ್ರಿ ೧೦ ಗಂಟೆಗೆ ಕೋಝಿಕೋಡ್ ನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಅವರು ಗಂಭೀರ ಸ್ಥಿತಿಯಲ್ಲಿದ್ದಾಗ ಅವರ ದೇಹವು ಔಷಧಿಗಳಿಗೆ ಸ್ಪಂದಿಸುತ್ತಿದೆ ಎಂದು ವೈದ್ಯರು ಮಾಹಿತಿ ನೀಡಿದ್ದರು. ಹೀಗಾಗಿ ಇದು ಪ್ರೀತಿಯ ಬರಹಗಾರ ಚೇತರಿಸಿಕೊಳ್ಳಬಹುದು ಎಂಬ ಭರವಸೆ ಮತ್ತು ಸಾಂತ್ವನವನ್ನು ಹೆಚ್ಚಿಸಿತು. ಆದರೆ, ರಾತ್ರಿಯ ವೇಳೆಗೆ ಆಸ್ಪತ್ರೆಯ ಅಧಿಕಾರಿಗಳು ಅವರ ಸಾವನ್ನು ದೃಢಪಡಿಸಿದರು.
“ಎಂಟಿ ನಿಧನರಾಗಿದ್ದಾರೆ” ಎಂದು ಆಸ್ಪತ್ರೆಯ ಮೂಲಗಳು ಪಿಟಿಐಗೆ ತಿಳಿಸಿವೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti deneme bonusu veren siteler deneme bonusu veren siteler
Exit mobile version