ಮಗು ಕಳವು ಪ್ರಕರಣ: ವಾಣಿ ವಿಲಾಸ್ ಆಸ್ಪತ್ರೆ ವಿರುದ್ಧ ನೋಟಿಸ್ ಜಾರಿ - Mahanayaka

ಮಗು ಕಳವು ಪ್ರಕರಣ: ವಾಣಿ ವಿಲಾಸ್ ಆಸ್ಪತ್ರೆ ವಿರುದ್ಧ ನೋಟಿಸ್ ಜಾರಿ

23/11/2020

ಬೆಂಗಳೂರು: ಎರಡು ದಿನದ ಮಗುವನ್ನು ಕಳ್ಳತನ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ವಾಣಿ ವಿಲಾಸ್ ಆಸ್ಪತ್ರೆಯ ಭದ್ರತಾ ಲೋಪದ ವಿರುದ್ಧ  ದಕ್ಷಿಣ ವಿಭಾಗ ಡಿಸಿಪಿ ಹರೀಶ್ ಪಾಂಡೆ ವಿರುದ್ಧ ನೋಟಿಸ್ ಜಾರಿ ಮಾಡಿದ್ದಾರೆ.

ಆಸ್ಪತ್ರೆಯಲ್ಲಿ 12 ಸಿಸಿಟಿವಿಗಳಿವೆ. ಇದರಲ್ಲಿ 10 ಕಾರ್ಯ ನಿರ್ವಹಿಸುತ್ತಿಲ್ಲ, ಮಗು ನಾಪತ್ತೆಯಾದ ಸಂದರ್ಭದಲ್ಲಿ ಯಾರೆಲ್ಲ ಇದ್ದರು? ಮಗುವನ್ನು ಬಂದು ಕೇಳಿದಾಗ ಯಾವುದೇ ಮಾಹಿತಿ ಪಡೆಯದೇ ಹೇಗೆ ಅವರ ಕೈಗೆ ನೀಡಿದ್ದೀರಿ ಎಂಬ ಪ್ರಶ್ನೆಗಳಿಗೆ ಉತ್ತರಿಸುವಂತೆ ನೋಟಿಸ್ ನೀಡಲಾಗಿದೆ.

ಈ ಹಿಂದೆ ಕೂಡ ವಾಣಿ ವಿಲಾಸ್ ಆಸ್ಪತ್ರೆಯ ವ್ಯವಸ್ಥೆ ಬಗ್ಗೆ ಉತ್ತರ ನೀಡುವಂತೆ ಆಸ್ಪತ್ರೆಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು. ಈ ವೇಳೆ, ಮೆಟ್ರೋ ಕಾಮಗಾರಿ ಹಿನ್ನೆಲೆ ಸಿಸಿಟಿವಿ ಕೆಲಸ ಮಾಡುತ್ತಿಲ್ಲ. ಚಿಕ್ಕ ಸಮಸ್ಯೆಗಳಿವೆ ಇವುಗಳನ್ನೆಲ್ಲ ಬಗೆಹರಿಸುವುದಾಗಿ ಉತ್ತರ ನೀಡಿದ್ದರು ಎಂದು ಹೇಳಲಾಗಿದೆ.

Disclaimer:

www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.

ಇತ್ತೀಚಿನ ಸುದ್ದಿ