ಜೂನ್ 1ರಿಂದ ಮಂಗಳೂರು–ಬೆಂಗಳೂರು ಹಗಲು ರೈಲುಗಳು ರದ್ದು: ಕಾರಣ ಏನು?
ಬೆಂಗಳೂರು: ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ಸೆಕ್ಷನ್ ಮಧ್ಯೆ ರೈಲು ಮಾರ್ಗದ ವಿದ್ಯುದ್ದೀಕರಣ (ಆರ್ಇ) ಕಾಮಗಾರಿ ಹಿನ್ನೆಲೆಯಲ್ಲಿ ಮಂಗಳೂರು–ಬೆಂಗಳೂರು ನಡುವೆ ಜೂ.1ರಿಂದ ನ.1ರ ವರೆಗೆ ಸುಮಾರು 154 ದಿನಗಳ ಕಾಲ ಹಗಲು ರೈಲುಗಳ ಸಂಚಾರ ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ ಎಂದು ನೈರುತ್ಯ ರೈಲ್ವೆಯ ಪ್ರಕಟಣೆ ತಿಳಿಸಿದೆ.
ಮೇ 31 ರಿಂದ ನವೆಂಬರ್ 1 ರವರೆಗೆ ಪ್ರತಿ ಶನಿವಾರದಂದು ಸಂಚರಿಸುವ ಯಶವಂತಪುರ ಟು ಮಂಗಳೂರು ಜಂಕ್ಷನ್ ಸಾಪ್ತಾಹಿಕ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16539) ರದ್ದಾಗಲಿದೆ. ಅದೇ ರೀತಿ, ಜೂನ್ 1 ರಿಂದ ನವೆಂಬರ್ 2 ರವರೆಗೆ ಪ್ರತಿ ಭಾನುವಾರದಂದು ಸಂಚರಿಸುವ ಮಂಗಳೂರು ಜಂಕ್ಷನ್ ಟು ಯಶವಂತಪುರ ಸಾಪ್ತಾಹಿಕ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16540) ಸಂಚಾರ ರದ್ದಾಗಲಿದೆ.
ಇದಲ್ಲದೆ, ಜೂನ್ 2 ರಿಂದ ಅಕ್ಟೋಬರ್ 31 ರವರೆಗೆ ಸೋಮವಾರ, ಬುಧವಾರ ಮತ್ತು ಶುಕ್ರವಾರದಂದು ಸಂಚರಿಸುವ ಯಶವಂತಪುರ ಟು ಕಾರವಾರ ಟ್ರೈ–ವೀಕ್ಲಿ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16515) ಹಾಗೂ ಜೂನ್ 3ರಿಂದ ನವೆಂಬರ್ 1 ರವರೆಗೆ ಮಂಗಳವಾರ, ಗುರುವಾರ ಮತ್ತು ಶನಿವಾರದಂದು ಸಂಚರಿಸುವ ಕಾರವಾರ ಟು ಯಶವಂತಪುರ ಟ್ರೈ-ವೀಕ್ಲಿ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16516) ರೈಲುಗಳ ಸಂಚಾರವನ್ನು ಸಹ ರದ್ದುಗೊಳಿಸಲಾಗಿದೆ ಎಂದು ನೈರುತ್ಯ ರೈಲ್ವೆ ಮಾಹಿತಿ ತಿಳಿಸಿದೆ.

Provided by

Provided by

Provided by

Provided by

Provided by

Provided by

Provided by

Provided by

Provided by

Provided by

Provided by
ಗೊಮ್ಮಟೇಶ್ವರ ಎಕ್ಸ್ ಪ್ರೆಸ್, ಕಾರವಾರ ಎಕ್ಸ್ ಪ್ರೆಸ್, ಮಂಗಳೂರು ಸೆಂಟ್ರಲ್ ವಾರದ ವಿಶೇಷ ಎಕ್ಸ್ಪ್ರೆಸ್ ಮುಂದಿನ 5 ತಿಂಗಳು ರದ್ದಾಗಲಿವೆ. ಬೆಂಗಳೂರಿನಿಂದ ಕರಾವಳಿ ಭಾಗಕ್ಕೆ ಸಂಚಾರ ನಡೆಸುವ 12 ರೈಲುಗಳ ಪೈಕಿ 6 ರೈಲುಗಳು ಸಂಪೂರ್ಣ ರದ್ದಾಗುತ್ತಿವೆ. ಈ ಮೂಲಕ ಪ್ರಯಾಣಿಕರು ಬದಲಿ ಮಾರ್ಗ ಆಯ್ದುಕೊಳ್ಳಬೇಕಾದ ಅನಿವಾರ್ಯತೆ ಇದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD




























