ಮಂಗಳೂರು: ರೌಡಿಶೀಟರ್ ನ ಬರ್ಬರ ಹತ್ಯೆ - Mahanayaka

ಮಂಗಳೂರು: ರೌಡಿಶೀಟರ್ ನ ಬರ್ಬರ ಹತ್ಯೆ

26/11/2020

ಮಂಗಳೂರು: ರೌಡಿ ಶೀಟರ್ ಓರ್ವನನ್ನು ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕುದ್ರೋಳಿ ಬಳಿಯ ಕರ್ನಲ್‌ ಗಾರ್ಡನ್ ನಡೆದಿದ್ದು,  ಬುಧವಾರ ತಡರಾತ್ರಿ ಅಥವಾ ಬೆಳಗ್ಗಿನ ಜಾವ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.


Provided by

ಪಾಂಡೇಶ್ವರ ಠಾಣಾ ವ್ಯಾಪ್ತಿಯಲ್ಲಿ ರೌಡಿ ಶೀಟರ್ ಆಗಿದ್ದ ನಿವಾಸಿ ಇಂದ್ರಜಿತ್ (45) ಹತ್ಯೆಗೊಳಗಾಗಿರುವ ವ್ಯಕ್ತಿಯಾಗಿದ್ದಾನೆ. ಇಂದ್ರಜಿತ್ ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಗಾರ್ಡನ್ ಬಳಿಯಲ್ಲಿ ಮೃತದೇಹವನ್ನು ಎಸೆಯಲಾಗಿದೆ ಎಂದು ಹೇಳಲಾಗಿದೆ.

ಬೆಳಗ್ಗೆ ಸುಮಾರು 6 ಗಂಟೆಗೆ ಮೃತದೇಹ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಬರ್ಕೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮಾಹಿತಿ ಕಲೆ ಹಾಕುತ್ತಿದ್ದಾರೆ.

ಇತ್ತೀಚಿನ ಸುದ್ದಿ