ಮತ ಎಣಿಕೆ ವೇಳೆ ಚುನಾವಣಾಧಿಕಾರಿ ಹೃದಯಾಘಾತದಿಂದ ಸಾವು
ಮೈಸೂರು: ಕರ್ತವ್ಯದಲ್ಲಿದ್ದ ಚುನಾವಣಾಧಿಕಾರಿಯೊಬ್ಬರು ಹೃದಯಾಘಾತದಿಂದ ಮತ ಎಣಿಕಾ ಕೇಂದ್ರದಲ್ಲಿಯೇ ಮೃತಪಟ್ಟ ಘಟನೆ ಮೈಸೂರಿನ ಪಿರಿಯಾಪಟ್ಟಣದ ಪುಷ್ಪ ಕಾನ್ವೆಂಟ್ ಮತ ಎಣಿಕಾ ಕೇಂದ್ರದಲ್ಲಿ ನಡೆದಿದೆ.
ಲೋಕೋಪಯೋಗಿ ಇಲಾಖೆಯಲ್ಲಿ ಎಇಇ ಆಗಿದ್ದ ಬೋರೇಗೌಡ(52) ಎನ್.ಶೆಟ್ಟಹಳ್ಳಿ ಗ್ರಾಮ ಪಂಚಾಯತ್ ಚುನಾವಣಾ ಅಧಿಕಾರಿಯಾಗಿ ನೇಮಕವಾಗಿದ್ದರು. ಮತ ಎಣಿಕೆ ನಡೆಯುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.
ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೋರೇ ಗೌಡರು ಅಸ್ವಸ್ಥರಾಗಿದ್ದು, ತೀವ್ರ ಎದೆನೋವಿನಿಂದ ಬಳಲಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಅವರು ನಿಧನರಾಗಿದ್ದಾರೆ.
Disclaimer:
www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.