7:30 AM Friday 11 - September 2026

ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮುಗೆ ಬಿಎಸ್ ಪಿ ಬೆಂಬಲ

mayawati
25/06/2022

ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ನೇತೃತ್ವದ ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮುಗೆ ಬಹುಜನ ಸಮಾಜವಾದಿ ಪಕ್ಷ ಬೆಂಬಲ ಘೋಷಿಸಿದೆ.

ಆದಿವಾಸಿ ಸಮಾಜ ಬಿಎಸ್ ಪಿ ಪಕ್ಷದ ಅವಿಭಾಜ್ಯ ಅಂಗ ಎಂಬುದನ್ನು ಗಮನದಲ್ಲಿಟ್ಟುಕೊಂಡು ದ್ರೌಪದಿ ಮುರ್ಮು ಅವರಿಗೆ ಬೆಂಬಲ ನೀಡಲು ಪಕ್ಷ ನಿರ್ಧರಿಸಿದೆ ಎಂದು ಬಿಎಸ್ ಪಿ ನಾಯಕಿ ಮಾಯಾವತಿ ತಿಳಿಸಿದ್ದಾರೆ.

ಈ ನಿರ್ಧಾರ ಬಿಜೆಪಿ ಅಥವಾ ಎನ್ ಡಿಎ ಪರವಾಗಿಯೋ ಅಥವಾ ಯುಪಿಎ ವಿರುದ್ಧವಾಗಿಯೋ ತೆಗೆದುಕೊಂಡಿರುವುದಲ್ಲ. ಬದಲಾಗಿ, ಆದಿವಾಸಿ ಮಹಿಳೆಯನ್ನು ರಾಷ್ಟ್ರಪತಿಯನ್ನಾಗಿಸುವುದಕ್ಕೆ ನಮ್ಮ ಪಕ್ಷ ಹಾಗೂ ಅದರ ಚಳುವಳಿಯನ್ನು ಗಮನದಲ್ಲಿಟ್ಟುಕೊಂಡು ತೆಗೆದುಕೊಂಡಿರುವುದಾಗಿದೆ ಎಂದು ಮಾಯಾವತಿ ತಿಳಿಸಿದ್ದಾರೆ.

ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯನ್ನು ನಿರ್ಧರಿಸುವಾಗ ವಿಪಕ್ಷಗಳು ತಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂದು ಮಾಯಾವತಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಜಿ-7 ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಜರ್ಮನಿಗೆ!

ತರಕಾರಿ ಮಾರಾಟದ ನೆಪದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಯುವಕ ಅರೆಸ್ಟ್

ಇಡಿ ಮುಂದೆ ಹಾಜರಾಗಲು ರಾಹುಲ್ ಗಾಂಧಿ ನಾಟಕ ಆಡುತ್ತಿದ್ದಾರೆ: ಅಮಿತ್ ಶಾ

ಭಾರೀ ಪ್ರವಾಹಕ್ಕೆ ಸಿಲುಕಿ 40 ಮಂದಿ ಸಾವು: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ

ಇಂಗ್ಲಿಷ್ ಮಾತನಾಡದಿದ್ದಕ್ಕೆ 4 ವರ್ಷದ ಬಾಲಕನಿಗೆ ಥಳಿತ: ಶಿಕ್ಷಕ ಅರೆಸ್ಟ್

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti
Exit mobile version