ಲೋಕ ಅಖಾಡದಲ್ಲಿ ಸಚಿವರ ಮಕ್ಕಳ ಸ್ಪರ್ಧೆ: ಯಾರು ಗೆದ್ರು..? ಯಾರು ಸೋತ್ರು..? - Mahanayaka
12:50 AM Tuesday 22 - October 2024

ಲೋಕ ಅಖಾಡದಲ್ಲಿ ಸಚಿವರ ಮಕ್ಕಳ ಸ್ಪರ್ಧೆ: ಯಾರು ಗೆದ್ರು..? ಯಾರು ಸೋತ್ರು..?

04/06/2024

2024ರ ಲೋಕಸಭೆ ಚುನಾವಣೆ ಹಲವು ವಿದ್ಯಮಾನಗಳಿಗೆ ಸಾಕ್ಷಿಯಾಗಿದೆ. ಕರ್ನಾಟಕದಲ್ಲಿ ಸಚಿವರ ಮಕ್ಕಳೂ ಕೂಡ ಸ್ಪರ್ಧಿಸಿದ್ದು, ಅವರ ರಾಜಕೀಯ ಭವಿಷ್ಯ ಬಹಿರಂಗಗೊಂಡಿದೆ. ಯಾರು ಗೆದ್ರು..? ಯಾರು ಸೋತ್ರು..? ಇಲ್ಲಿದೆ ನೋಡಿ ಮಾಹಿತಿ.

ಬಾಗಲಕೋಟೆ ಲೋಕಸಭಾ ಕ್ಷೇತ್ರದಲ್ಲಿ ಸತತ ಸೋಲಿನಿಂದ ಕಂಗೆಟ್ಟಿದ್ದ ಕಾಂಗ್ರೆಸ್ ಈ ಚುನಾವಣೆಯಲ್ಲಿ ಸಚಿವ ಶಿವಾನಂದ ಪಾಟೀಲ್ ಪುತ್ರಿ,​ ಯುವ ಮುಖ ಸಂಯಕ್ತಾ ಪಾಟೀಲ್​ ರನ್ನು ಅಖಾಡಕ್ಕಿಳಿಸಿತ್ತು. ಆದರೆ ಸಂಯುಕ್ತ ಪಾಟೀಲ್​ ರಿಗೆ ಸೋಲಾಗಿದೆ.

ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸಚಿವ ಸತೀಶ್ ಜಾರಕಿಹೊಳಿ ಯವರ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಕಣದಲ್ಲಿದ್ದರು. ಪ್ರಿಯಾಂಕಾ ಸತೀಶ್ ಜಾರಕಿಹೊಳಿ ಇದೇ ಮೊದಲ ಬಾರಿಗೆ ಚುನಾವಣೆ ಎದುರಿಸಿದ್ದು, ಮೊದಲ ಚುನಾವಣೆಯಲ್ಲೇ ಗೆಲುವು ಸಾಧಿಸಿದ್ದಾರೆ.

ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಕಣದಲ್ಲಿದ್ದರು. ಲಿಂಗಾಯತ ಮತಗಳ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ಗೆಲುವಿನ ವಿಶ್ವಾಸ ಹೊಂದಿತ್ತು. ಆದರೆ ಅನುಭವಿ ರಾಜಕಾರಣಿ ಜಗದೀಶ್​ ಶೆಟ್ಟರ್​ ರ ವಿರುದ್ಧ ಸೋಲು ಕಂಡಿದ್ದಾರೆ.

ಬೀದರ್​ ಲೋಕಸಭಾ ಕ್ಷೇತ್ರದಲ್ಲಿ 1991ರಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು ಸಾಧಿಸಿತ್ತು. ಅಲ್ಲಿಂದ ಇಲ್ಲಿಯವರೆಗೆ ಬಿಜೆಪಿ ಇಲ್ಲಿ ಹಿಡಿತ ಸಾಧಿಸಿಕೊಂಡು ಬಂದಿದೆ. ಹೀಗಾಗಿ ಈ ಬಾರಿ ಸಚಿವ ಈಶ್ವರ್ ಖಂಡ್ರೆ ಯವರ ಪುತ್ರ ಸಾಗರ್ ಖಂಡ್ರೆ ಮೂಲಕ ಕಾಂಗ್ರೆಸ್ ಈ ಕ್ಷೇತ್ರದಲ್ಲಿ ಗೆಲ್ಲುವ ಕನಸು ಕಂಡಿತ್ತು. ಈ ಕನಸು ನನಸಾಗಿದ್ದು, ಸಾಗರ ಖಂಡ್ರೆ ವಿಜಯಶಾಲಿಯಾಗಿದ್ದಾರೆ.

2023 ವಿಧಾನಸಭೆ ಚುನಾವಣೆಯಲ್ಲಿ ಅತ್ಯಂತ ಕಡಿಮೆ ಮತಗಳಿಂದ ಸೋತಿದ್ದ ಸಚಿವ ರಾಮಲಿಂಗಾ ರೆಡ್ಡಿಯವರ ಪುತ್ರಿ ಸೌಮ್ಯಾ ರೆಡ್ಡಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ನಿಂದ ಅದೃಷ್ಟ ಪರೀಕ್ಷೆಗೆ ಇಳಿದಿದ್ದರು. ಆದರೆ ಸೌಮ್ಯಾ ರೆಡ್ಡಿ ಸೋಲುಂಡಿದ್ದಾರೆ.

 

 

ಇತ್ತೀಚಿನ ಸುದ್ದಿ