ಮಣಿಪುರದಲ್ಲಿ ನಾಪತ್ತೆ: ಕರ್ನಾಟಕದಲ್ಲಿ ಬಾಲಕಿಯ ರಕ್ಷಣೆ
ಮಣಿಪುರ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯು ಕುಟುಂಬದೊಂದಿಗೆ ಸಂಪರ್ಕ ಕಳೆದುಕೊಂಡಿದ್ದ ಬಾಲಕಿಯನ್ನು ರಕ್ಷಿಸಿದೆ. ಹೈದರಾಬಾದ್, ಕೇರಳ ಮತ್ತು ಕರ್ನಾಟಕ ಸೇರಿದಂತೆ ಅನೇಕ ರಾಜ್ಯಗಳಲ್ಲಿ ರಕ್ಷಣಾ ಕಾರ್ಯಾಚರಣೆ ನಡೆದು ಬಾಲಕಿಯನ್ನು ಸುರಕ್ಷಿತವಾಗಿ ಪೋಷಕರಿಗೆ ಮರಳಿಸಲಾಯಿತು.
ಹೈದರಾಬಾದ್ ನಲ್ಲಿ ಅಪ್ರಾಪ್ತೆಯ ಬಂಧನ ಮತ್ತು ಕಿರುಕುಳದ ಬಗ್ಗೆ ಮಣಿಪುರ ವಿದ್ಯಾರ್ಥಿ ಸಂಘ ದೆಹಲಿ (ಎಂಎಸ್ಎಡಿ) ಸಮಾಜ ಕಲ್ಯಾಣ ಇಲಾಖೆಗೆ ಕರೆ ಮಾಡಿದಾಗ ಬಾಲಕಿಯ ಅಗ್ನಿಪರೀಕ್ಷೆ ಪ್ರಾರಂಭವಾಯಿತು. ಬಾಲಕಿ ಮಣಿಪುರದ ತೌಬಲ್ ಜಿಲ್ಲೆಯವಳಾಗಿದ್ದಾಳೆ.
ಈ ಬಗ್ಗೆ ಮಾಹಿತಿ ಪಡೆದ ಇಲಾಖೆಯ ಉಪ ನಿರ್ದೇಶಕಿ ಕೆ.ಸರೋಜಾದೇವಿ ನೇತೃತ್ವದ ತಂಡವು ತನಿಖೆ ಮಾಡಿ ರಾಜ್ಯ ಪೊಲೀಸರು ಮತ್ತು ಇತರ ಸ್ಥಳೀಯ ಅಧಿಕಾರಿಗಳ ಸಹಾಯದಿಂದ ಕರ್ನಾಟಕದ ಬೆಳಗಾವಿಯಲ್ಲಿ ಬಾಲಕಿಯನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದೆ.
ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕ ಎನ್.ಜಿ.ಉತ್ತಮ್ ಅವರ ಪ್ರಕಾರ, ಸಂತ್ರಸ್ತೆ ಡೈಸಿ (ಹೆಸರು ಬದಲಾಯಿಸಲಾಗಿದೆ)ಯನ್ನು ಆರೋಪಿ ಕರ್ನಾಟಕದ ಬೆಳಗಾವಿಗೆ ಕರೆದುಕೊಂಡು ಹೋಗಿದ್ದ ಎಂದು ತಿಳಿಸಿದ್ದಾರೆ.
ಇಲಾಖೆಯ ಅಧಿಕಾರಿಗಳ ಜಂಟಿ ಪ್ರಯತ್ನಗಳು ಮತ್ತು ಬೆಳಗಾವಿಯ ಸ್ಥಳೀಯ ಅಧಿಕಾರಿಗಳ ಸಹಾಯವು ಬಾಲಕಿಯನ್ನು ರಕ್ಷಿಸಲು ಕಾರಣವಾಯಿತು.
ಕ್ರಿಮಿನಲ್ ಉದ್ದೇಶದಿಂದ ಡೈಸಿಯನ್ನು ಆಕರ್ಷಿಸುವುದು ಮತ್ತು ಬಂಧಿಸುವುದು ಸೇರಿದಂತೆ ವಿವಿಧ ಅಪರಾಧಗಳಿಗಾಗಿ ಆರೋಪಿಯ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಈ ಕುರಿತು ಹೆಚ್ಚಿನ ವಿಚಾರಣೆ ನಡೆಯುತ್ತಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth