ಈ ಬಾರಿ ಬಹಳ ಬೇಗನೇ ಮಳೆ ಆರಂಭವಾಗಲಿದೆಯಂತೆ: ಹೀಗಿದೆ ನೋಡಿ ವರದಿ - Mahanayaka
12:37 AM Wednesday 14 - January 2026

ಈ ಬಾರಿ ಬಹಳ ಬೇಗನೇ ಮಳೆ ಆರಂಭವಾಗಲಿದೆಯಂತೆ: ಹೀಗಿದೆ ನೋಡಿ ವರದಿ

rain
15/05/2024

ದೆಹಲಿ: ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಈಗಾಗಲೇ ಪೂರ್ವ ಮುಂಗಾರು ಚುರುಕಾಗಿದೆ.  ಕಳೆದ ಹತ್ತು ದಿನದಿಂದ ಕರ್ನಾಟಕದ ಹದಿನೈದಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಲೇ ಇದೆ.

ಬೆಂಗಳೂರು, ಮೈಸೂರು, ಬೆಳಗಾವಿ, ಧಾರವಾಡ, ಹಾಸನ, ಕೊಡಗು, ಚಿಕ್ಕಮಗಳೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಪೂರ್ವ ಮುಂಗಾರು ಅಬ್ಬರಿಸಿದೆ. ಈ ಬಾರಿ ನೈಋತ್ಯ ಮಾನ್ಸೂನ್ ಮೇ 19 ರ ಸುಮಾರಿಗೆ ದಕ್ಷಿಣ ಅಂಡಮಾನ್ ಸಮುದ್ರ, ಆಗ್ನೇಯ ಬಂಗಾಳ ಕೊಲ್ಲಿಯ ಕೆಲವು ಭಾಗಗಳು ಮತ್ತು ನಿಕೋಬಾರ್ ದ್ವೀಪಗಳಲ್ಲಿ ಆಗಮಿಸಿ ಭಾರತದ ಇತರೆಡೆಗೆ ನಿಧಾನವಾಗಿ ಹಂಚಿಕೆಯಾಗುವ ಸಾಧ್ಯತೆಯಿದೆ.  ಈ ಕುರಿತು ಭಾರತೀಯ ಹವಾಮಾನ ಇಲಾಖೆ( IMD) ಮುಂಗಾರು ಮಳೆ ಆರಂಭದ ಕುರಿತು ಮಾಹಿತಿ ಬಿಡುಗಡೆ ಮಾಡಿದೆ.

ಮೇ 19, 20 ಮತ್ತು 21 ರಂದು ಅಂಡಮಾನ್ ಸಮುದ್ರ ಪ್ರದೇಶದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಮಾದರಿಗಳು ಸೂಚಿಸುತ್ತಿವೆ. ಅಂಡಮಾನ್ ಪ್ರದೇಶವನ್ನು ತಲುಪಿದ ನಂತರ ಮಾನ್ಸೂನ್ ಕೇರಳವನ್ನು ತಲುಪಲು ಸಾಮಾನ್ಯವಾಗಿ ಸುಮಾರು 10 ದಿನಗಳನ್ನು ತೆಗೆದುಕೊಳ್ಳುತ್ತದೆ. ಈ ಬಾರಿಯೂ ಕರ್ನಾಟಕದಲ್ಲೂ ಬೇಗನೇ ಮುಂಗಾರು ಪ್ರವೇಶಿಸಬಹುದು. ಅದು ಮೇ ಕೊನೆಯ ವಾರದಲ್ಲಿಯೇ ಆಗಬಹುದು ಎನ್ನುವ ಅಂದಾಜಿದೆ ಎಂದು ಸ್ಕೈಮೆಟ್ ವೆದರ್‌ ನ ಮಹೇಶ್ ಪಲಾವತ್ ಹೇಳುತ್ತಾರೆ.

ನೈಋತ್ಯ ಮಾನ್ಸೂನ್ ಮೇ 19 ರ ಸುಮಾರಿಗೆ ದಕ್ಷಿಣ ಅಂಡಮಾನ್ ಸಮುದ್ರ, ಆಗ್ನೇಯ ಬಂಗಾಳ ಕೊಲ್ಲಿಯ ಕೆಲವು ಭಾಗಗಳು ಮತ್ತು ನಿಕೋಬಾರ್ ದ್ವೀಪಗಳಿಗೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಐಎಂಡಿ (ಭಾರತ ಹವಾಮಾನ ಇಲಾಖೆ) ತಿಳಿಸಿದೆ.

ಮಾನ್ಸೂನ್ ಸಾಮಾನ್ಯವಾಗಿ ಜೂನ್ 1 ರ ಸುಮಾರಿಗೆ ಆರಂಭಗೊಂಡು ನಂತರ ಕೇರಳ ಕಡೆಗೆ ಸಾಗುತ್ತದೆ. ನಂತರ ಅದು ಉತ್ತರದ ಕಡೆಗೆ ಮುಂದುವರಿಯುತ್ತದೆ, ಜೂನ್‌ ನಲ್ಲಿ ಸಾಮಾನ್ಯವಾಗಿ ಹೆಚ್ಚುತ್ತಾ ಹೋಗಿ ಜುಲೈ 15 ರ ಸುಮಾರಿಗೆ ಇಡೀ ದೇಶವನ್ನು ಆವರಿಸುತ್ತದೆ.

ಜೂನ್ ನಿಂದ ಸೆಪ್ಟೆಂಬರ್ ನಡುವೆ ದೇಶಾದ್ಯಂತ ಮಾನ್ಸೂನ್ ಮಳೆಯು ದೀರ್ಘಾವಧಿಯ ಸರಾಸರಿಯ (LPA) ಶೇ.106 ರಷ್ಟು ಸಾಮಾನ್ಯಕ್ಕಿಂತ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಐಎಂಡಿ ಮೇ 15 ರಂದು ತನ್ನ ದೀರ್ಘಾವಧಿ ಮುನ್ಸೂಚನೆಯಲ್ಲಿ ತಿಳಿಸಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಫೇಸ್ ಬುಕ್ ಪೇಜ್ ಫಾಲೋ ಮಾಡಿ: https://www.facebook.com/profile.php?id=61556202767068

ಇತ್ತೀಚಿನ ಸುದ್ದಿ