ರೇಣುಕಾಸ್ವಾಮಿ ಹತ್ಯೆ ಪ್ರಕರಣದ 4ನೇ ಆರೋಪಿ ರಾಘವೇಂದ್ರನ ತಾಯಿ ನಿಧನ - Mahanayaka
11:09 AM Saturday 7 - February 2026

ರೇಣುಕಾಸ್ವಾಮಿ ಹತ್ಯೆ ಪ್ರಕರಣದ 4ನೇ ಆರೋಪಿ ರಾಘವೇಂದ್ರನ ತಾಯಿ ನಿಧನ

raghu
20/07/2024

ಚಿತ್ರದುರ್ಗ: ಮಹಿಳೆಯರಿಗೆ ಅಶ್ಲೀಲ ಮೆಸೇಜ್ ಮಾಡುತ್ತಿದ್ದ ಎಂಬ ಆರೋಪದಲ್ಲಿ ಹತ್ಯೆಯಾಗಿದ್ದ ಚಿತ್ರದುರ್ಗದ ರೇಣುಕಾಸ್ವಾಮಿ ಪ್ರಕರಣದ ನಾಲ್ಕನೇ ಆರೋಪಿ ರಾಘವೇಂದ್ರನ ತಾಯಿ ನಿಧನರಾಗಿದ್ದಾರೆ.

ಮಂಜುಳಮ್ಮ (75) ನಿಧನರಾದವರಾಗಿದ್ದು, ಇಂದು ಕೋಳಿಬುರುಜನಹಟ್ಟಿ ಮನೆಯಲ್ಲಿ ಬೆಳಗ್ಗೆ ಅವರು ಕೊನೆಯುಸಿರೆಳೆದಿದ್ದಾರೆ.  ಇವರು ಮಾನಸಿಕ ಅಸ್ವಸ್ಥತೆ, ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ.

ಮಂಜುಳಮ್ಮ ತಮ್ಮ ಇನ್ನೊಬ್ಬ ಪುತ್ರ ಮುರಳಿ ಅವರ ಮನೆಯಲ್ಲಿ ಆರೈಕೆಯಲ್ಲಿದ್ದರು. ರಘು ಪತ್ನಿಯ ಜೊತೆಗೆ ಬೇರೆ ಮನೆಯಲ್ಲಿ ವಾಸವಿದ್ದರು. ಆಗಾಗ ತಾಯಿಯನ್ನು ಭೇಟಿಯಾಗಿ ಬರುತ್ತಿದ್ದರು ಎಂದು ತಿಳಿದು ಬಂದಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ