2:51 PM Wednesday 9 - September 2026

ದಲಿತ ಯುವಕನಿಗೆ ಹಲ್ಲೆ ನಡೆಸಿ ಮೂತ್ರ ಕುಡಿಸಿದ ಪ್ರಕರಣ | ಜೆಡಿಎಸ್ ಹೇಳಿದ್ದೇನು ಗೊತ್ತಾ?

h k kumaraswamy
25/05/2021

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಿರಗುಂದ ಗ್ರಾಮದ ಪುನೀತ್ ಎಂಬ ಯುವಕನ ಮೇಲೆ ಹಲ್ಲೆ ನಡೆಸಿ ಮೂತ್ರ ಕುಡಿಸಿದ ಆರೋಪಿ ಅಧಿಕಾರಿಯನ್ನು ಬಂಧಿಸಬೇಕು ಎಂದು ಜೆಡಿಎಸ್, ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.

ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ. ಕುಮಾರಸ್ವಾಮಿ , ಈ ಬಗ್ಗೆ ಪ್ರಕಟಣೆ ಹೊರಡಿಸಿದ್ದು,  ಕಾನೂನು ಪಾಲನೆ ಮಾಡಬೇಕಾದವರೇ ಈ ರೀತಿಯಾಗಿ ವರ್ತಿಸಿರುವುದು ಅತ್ಯಂತ ಹೇಯ ಕೃತ್ಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಲಿತರ ಮೇಲಿನ ದೌರ್ಜನ್ಯಗಳು ರಾಜ್ಯದಲ್ಲಿ ಏರಿಕೆಯಾಗುತ್ತಿದೆ. ಆದರೆ ಕ್ರಮಕೈಗೊಳ್ಳಲು ಸರ್ಕಾರ ವಿಫಲವಾಗಿದೆ. ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ  ಸರ್ಕಾರ ಸೂಕ್ತ ಕಾನೂನು ಕ್ರಮವನ್ನು ಜರಗಿಸಬೇಕು ಎಂದು ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti
Exit mobile version