ಮುಳ್ಳಯ್ಯನಗಿರಿ: ಭಾರೀ ಮಳೆಗೆ ಪಲ್ಟಿಯಾದ ಕಾರು

ಚಿಕ್ಕಮಗಳೂರು: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಭಾರೀ ಗಾಳಿ–ಮಳೆ ಹಿನ್ನೆಲೆ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಘಟನೆ ನಡೆದಿದೆ.
ರಸ್ತೆ ತಿರುವಿನಲ್ಲಿ ಕಾರು ಪಲ್ಟಿಯಾಗಿದ್ದು, ದತ್ತಪೀಠ ಮಾರ್ಗದ ಕವಿಕಲ್ ಗಂಡಿ ಬಳಿ ಘಟನೆ ನಡೆದಿದೆ. ಕಾರಿನಲ್ಲಿದ್ದ ಐವರು ಪ್ರಾಣಾಪಾಯದಿಂದ ಪಾರಾಗಿದ್ದು, ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ
ಕಾರು ಬಿದ್ದ ಕೂಡಲೇ ಹಿಂದಿನ ವಾಹನದಲ್ಲಿದ್ದ ಪ್ರಯಾಣಿಕರು ಕಾರಿನಲ್ಲಿದ್ದವರನ್ನು ಹೊರ ತೆಗೆದು ರಕ್ಷಣೆ ಮಾಡಿದ್ದಾರೆ. ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಗಾಯಾಳುಗಳನ್ನ ಗ್ರಾಮಾಂತರ ಪೊಲೀಸರು ಆಸ್ಪತ್ರೆಗೆ ದಾಖಲಿಸಿದರು. ಚಿಕ್ಕಮಗಳೂರು ತಾಲೂಕಿನ ದತ್ತಪೀಠದ ಮಾರ್ಗದಲ್ಲಿ ಈ ದುರ್ಘಟನೆ ನಡೆದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD