4:04 AM Wednesday 22 - October 2025

ಮುಝಫ್ಫರ್ ನಗರದಲ್ಲಿ ಕಪಾಳಮೋಕ್ಷ ಪ್ರಕರಣ: ಹಲ್ಲೆಗೊಳಗಾದ ಮುಸ್ಲಿಂ ವಿದ್ಯಾರ್ಥಿಗೆ ಅನಾರೋಗ್ಯ; ಆಸ್ಪತ್ರೆಗೆ ದಾಖಲು

28/08/2023

ಮುಜಾಫರ್ ನಗರದ ಶಾಲಾ ಶಿಕ್ಷಕಿಯ ಆದೇಶದ ಮೇರೆಗೆ ಸಹಪಾಠಿಗಳಿಂದ ಕಪಾಳಮೋಕ್ಷಕ್ಕೊಳಗಾದ ಮುಸ್ಲಿಂ ವಿದ್ಯಾರ್ಥಿಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ. ನಿದ್ರೆ ಮಾಡಲು ಸಾಧ್ಯವಾಗದ ಬಗ್ಗೆ ದೂರು ನೀಡಿದ ನಂತರ ವೈದ್ಯಕೀಯ ತಪಾಸಣೆಗಾಗಿ ಮೀರತ್ ಗೆ ಕರೆದೊಯ್ಯಲಾಯಿತು.

‘ಕಳೆದ ರಾತ್ರಿಯಿಡೀ ಬಾಲಕನಿಗೆ ನಿದ್ರೆ ಮಾಡಲು ಸಾಧ್ಯವಾಗದ ಬಗ್ಗೆ ದೂರು ನೀಡಿದ ನಂತರ, ಬಾಲಕನನ್ನು ತಪಾಸಣೆಗಾಗಿ ಮೀರತ್ ಗೆ ಕರೆತರಲಾಯಿತು. ಬಾಲಕ ಆರೋಗ್ಯವಾಗಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.

ಈ ಘಟನೆಯಲ್ಲಿ ಭಾಗಿಯಾಗಿರುವ ಶಾಲಾ ಶಿಕ್ಷಕಿ ತೃಪ್ತಾ ತ್ಯಾಗಿ ಅವರೊಂದಿಗೆ ರಾಜಿ ಮಾಡಿಕೊಳ್ಳುವ ಬಗ್ಗೆ ಕೇಳಿದಾಗ, ಅವರೊಂದಿಗೆ ಯಾವುದೇ ರಾಜಿ ಇಲ್ಲ ಎಂದು ಸಂತ್ರಸ್ತ ಬಾಲಕನ ತಂದೆ ಹೇಳಿದ್ದಾರೆ.

ಏತನ್ಮಧ್ಯೆ, ಕುಟುಂಬ ಒಪ್ಪಿದರೆ ಬಾಲಕನನ್ನು ಸರ್ಕಾರಿ ಪ್ರಾಥಮಿಕ ಶಾಲೆಗೆ ಸೇರಿಸಲಾಗುವುದು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಶುಕ್ರವಾರ ಘಟನೆ ನಡೆದ ಖಬ್ಬುಪುರ ಗ್ರಾಮದ ನೇಹಾ ಪಬ್ಲಿಕ್ ಶಾಲೆಯಲ್ಲಿ ಓದುತ್ತಿರುವ ಇತರ ವಿದ್ಯಾರ್ಥಿಗಳನ್ನು ವರ್ಗಾವಣೆ ಮಾಡಲು ಇಲಾಖೆ ಅನುಕೂಲ ಮಾಡಿಕೊಡಲಿದೆ ಎಂದು ಅವರು ಹೇಳಿದ್ದಾರೆ.

ನೇಹಾ ಪಬ್ಲಿಕ್ ಶಾಲೆ ಉತ್ತರ ಪ್ರದೇಶ ಸರ್ಕಾರದ ಪ್ರಾಥಮಿಕ ಶಿಕ್ಷಣ ಇಲಾಖೆಗೆ ಸಂಯೋಜಿತವಾಗಿದೆ. ಪ್ರಸ್ತುತ ಶಾಲೆಯಲ್ಲಿ 50 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.
ಶಾಲಾ ಶಿಕ್ಷಕಿ ತ್ಯಾಗಿ ಶಾಲೆಯಲ್ಲಿ ಬೋಧನೆಯನ್ನು ಮುಂದುವರಿಸುತ್ತಾರೆಯೇ ಎಂದು ಕೇಳಿದಾಗ, ಅದು ಅವರ ವಿರುದ್ಧದ ಪೊಲೀಸ್ ಕ್ರಮವನ್ನು ಅವಲಂಬಿಸಿರುತ್ತದೆ ಎಂದು ಶುಕ್ಲಾ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

Exit mobile version