11:50 PM Thursday 21 - August 2025

‘ನನ್ನ ಅಭಿಪ್ರಾಯಗಳು ವೈಯಕ್ತಿಕ’: ಕೃಷಿ ಕಾನೂನು ಹೇಳಿಕೆಯನ್ನು ಬಿಜೆಪಿ ಖಂಡಿಸಿದ ನಂತರ ಕಂಗನಾ ರಾವತ್ ಪ್ರತಿಕ್ರಿಯೆ

25/09/2024

ರೈತರ ಪ್ರತಿಭಟನೆಯ ನಂತರ ರದ್ದುಪಡಿಸಲಾದ ಮೂರು ಕೃಷಿ ಸುಧಾರಣಾ ಕಾನೂನುಗಳನ್ನು ಮರಳಿ ತರಬೇಕು ಎಂದು ಸಲಹೆ ನೀಡುವ ಮೂಲಕ ನಟಿ ಮತ್ತು ರಾಜಕಾರಣಿ ಕಂಗನಾ ರಾವತ್ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾರೆ. ಅವರ ಹೇಳಿಕೆಗಳು ಸ್ವ ಪಕ್ಷ ಬಿಜೆಪಿಯಿಂದ ತೀವ್ರ ಟೀಕೆಗೆ ಗುರಿಯಾಗುತ್ತಿದ್ದಂತೆ, ಮಂಡಿ ಲೋಕಸಭಾ ಸಂಸದೆ ರಾವತ್ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ಹೇಳಿಕೆಗಳು ವೈಯಕ್ತಿಕವಾಗಿವೆ ಮತ್ತು ಪಕ್ಷದ ನಿಲುವಿಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಇನ್ನು ಬಿಜೆಪಿ ಕಂಗನಾ ಹೇಳಿಕೆಗಳಿಂದ ಅಂತರ ಕಾಯ್ದುಕೊಂಡಿದೆ ಮತ್ತು ಪಕ್ಷದ ಪರವಾಗಿ ಅಂತಹ ಹೇಳಿಕೆಗಳನ್ನು ನೀಡಲು ಕಂಗನಾ ರಾವತ್ ಅವರಿಗೆ ಅಧಿಕಾರವಿಲ್ಲ ಎಂದು ಹೇಳಿದೆ.

ವೀಡಿಯೊ ಸಂದೇಶದಲ್ಲಿ, ಬಿಜೆಪಿ ವಕ್ತಾರ ಗೌರವ್ ಭಾಟಿಯಾ ಅವರು, ಈ ಹೇಳಿಕೆಗಳು ಕಂಗನಾ ರಾವತ್ ಅವರ ವೈಯಕ್ತಿಕ ಹೇಳಿಕೆಯಾಗಿದೆ ಮತ್ತು ಕೃಷಿ ಮಸೂದೆಗಳ ಬಗ್ಗೆ ಪಕ್ಷದ ನಿಲುವನ್ನು ಪ್ರತಿನಿಧಿಸುವುದಿಲ್ಲ ಎಂದು ಹೇಳಿದ್ದಾರೆ.

ರಾವತ್ ತನ್ನ ಅಭಿಪ್ರಾಯಗಳ ವೈಯಕ್ತಿಕ ಸ್ವರೂಪವನ್ನು ಒತ್ತಿಹೇಳಲು ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ. “ಖಂಡಿತವಾಗಿಯೂ, ಕೃಷಿ ಕಾನೂನುಗಳ ಬಗ್ಗೆ ನನ್ನ ಅಭಿಪ್ರಾಯಗಳು ವೈಯಕ್ತಿಕವಾಗಿವೆ. ಅವು ಆ ಮಸೂದೆಗಳ ಬಗ್ಗೆ ಪಕ್ಷದ ನಿಲುವನ್ನು ಪ್ರತಿನಿಧಿಸುವುದಿಲ್ಲ. ಧನ್ಯವಾದಗಳು” ಎಂದಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version