ನಮ್ಮ ಮೆಟ್ರೋದಲ್ಲಿ ಇನ್ನು ಮುಂದೆ ತಮಿಳುನಾಡಿಗೂ ಪ್ರಯಾಣಿಸಬಹುದು! - Mahanayaka
1:58 PM Wednesday 17 - September 2025

ನಮ್ಮ ಮೆಟ್ರೋದಲ್ಲಿ ಇನ್ನು ಮುಂದೆ ತಮಿಳುನಾಡಿಗೂ ಪ್ರಯಾಣಿಸಬಹುದು!

namma mettro
11/06/2022

ಬೆಂಗಳೂರು: “ನಮ್ಮ ಮೆಟ್ರೋ’ ಈಗ ನೆರೆ ರಾಜ್ಯಕ್ಕೂ ತನ್ನ ಜಾಲವನ್ನು ವಿಸ್ತರಿಸಲು ಮುಂದಾಗಿದೆ. ಅಂದುಕೊಂಡಂತೆ ಎಲ್ಲವೂ ನಡೆದರೆ, ಮುಂಬರುವ ದಿನಗಳಲ್ಲಿ ಜನ ಮೆಟ್ರೋದಲ್ಲೇ ತಮಿಳುನಾಡಿಗೂ ತೆರಳಬಹುದು.


Provided by

ಬೊಮ್ಮಸಂದ್ರದಿಂದ ಹೊಸೂರು ಮಾರ್ಗವಾಗಿ 20.5 ಕಿ.ಮೀ.  ಈ ಮಾರ್ಗವು ಎಲೆಕ್ಟ್ರಾನಿಕ್ ಸಿಟಿ ಮೂಲಕ ಹಾದು ಹೋಗಲಿದೆ.  ಇದರಲ್ಲಿ 11.7 ಕಿ.ಮೀ ಕರ್ನಾಟಕ ವ್ಯಾಪ್ತಿಯಲ್ಲಿದೆ.ಹಾಗೂ ಬಾಕಿ 8.8 ಕಿ.ಮೀ ತಮಿಳುನಾಡಿನಲ್ಲಿ ಬರಲಿದೆ.

ನಮ್ಮ ಮೆಟ್ರೋ ಆರ್‌.ವಿ.ರಸ್ತೆ-ಬೊಮ್ಮಸಂದ್ರ ಮಾರ್ಗ (ರೀಚ್-5) ತಮಿಳುನಾಡಿನ ಹೊಸೂರುವರೆಗೆ ವಿಸ್ತರಿಸಲಾಗುವುದು. ತಮಿಳುನಾಡು ಸರ್ಕಾರದಿಂದ ಹಳಿಗಳ ಕಾರ್ಯಸಾಧ್ಯತೆಯ ಅಧ್ಯಯನ ನಡೆಸಬೇಕು ಎಂಬ ವ್ಯವಸ್ಥೆಯ ಮೇಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಂಗೀಕಾರ ನೀಡಲಾಗಿದೆ ಎಂದು ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್‌ಸಿ) ಎಂಡಿ ಅಂಜುಮ್ ಪರ್ವೇಜ್ ಅವರು ಕೇಂದ್ರ ಗೃಹ ಕಾರ್ಯದರ್ಶಿಗೆ ತಿಳಿಸಿದ್ದಾರೆ.

ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಭಾಗವಾಗಿರುವ ಹೊಸೂರಿಗೆ ಮೆಟ್ರೊ ಓಡಿದರೆ ಬೆಂಗಳೂರಿನಿಂದ ಇಲ್ಲಿಗೆ ಪ್ರಯಾಣದ ಅವಧಿ ಅರ್ಧಕ್ಕಿಂತ ಕಡಿಮೆ ಇರುತ್ತದೆ.  ಹೊಸೂರಿನ ಕೈಗಾರಿಕಾ ಪ್ರದೇಶದಲ್ಲಿರುವ ಕಂಪನಿಗಳು ಮತ್ತು ಕಾರ್ಖಾನೆಗಳಿಗೆ ಕೆಲಸ ಮಾಡಲು ಪ್ರತಿದಿನ ಅನೇಕ ಜನರು ಗಡಿ ದಾಟಿ ಪ್ರಯಾಣ ಮಾಡುತ್ತಾರೆ. ಬೆಂಗಳೂರಿಗೆ ಕೆಲಸ ಮಾಡಲು ಹೊಸೂರಿನಿಂದ ಹೆಚ್ಚಿನ ಜನರು ಬರುತ್ತಾರೆ.  RV ರಸ್ತೆ-ಬೊಮ್ಮಸಂದ್ರ ನಮ್ಮ ಮೆಟ್ರೋ ನಿರ್ಮಾಣವು 2024 ರಲ್ಲಿ ಪೂರ್ಣಗೊಳ್ಳುವ ಹಂತದಲ್ಲಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಆಂಬುಲೆನ್ಸ್  ಸಿಗಲಿಲ್ಲ: ಮಗಳ ಮೃತದೇಹ ಹೆಗಲಲ್ಲಿ ಹೊತ್ತು ನಡೆದ ತಂದೆ!

ಕೋಳಿ ಸಾರಿಗಾಗಿ ಪತ್ನಿಯನ್ನು ಇರಿದುಕೊಂದ ಪಾಪಿ!

ಪ್ರವಾದಿ ವಿರುದ್ಧ ಹೇಳಿಕೆ ವಿರುದ್ಧ ಸಿಡಿದೆದ್ದ ಮುಸ್ಲಿಮರ ಪ್ರತಿಭಟನೆ ಬಗ್ಗೆ ಸುಬ್ರಮಣಿಯನ್‌ ಸ್ವಾಮಿ ಹೇಳಿದ್ದೇನು?

ಉಕ್ರೇನ್‌ ಗಾಗಿ ಹೋರಾಡಿದ ವಿದೇಶಿಯರಿಗೆ ಮರಣದಂಡನೆ ನೀಡಿದ ರಷ್ಯಾ

ಪುತ್ರಿಯ ಬೀದಿ ರಂಪಾಟಕ್ಕೆ ಅರವಿಂದ್ ಲಿಂಬಾವಳಿ ಹೇಳಿದ್ದೇನು?

ಇತ್ತೀಚಿನ ಸುದ್ದಿ