ಹೃದಯ ವಿದ್ರಾವಕ ಘಟನೆ: ನೀರಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ಕು ಮಕ್ಕಳು ಸಾವು - Mahanayaka

ಹೃದಯ ವಿದ್ರಾವಕ ಘಟನೆ: ನೀರಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ಕು ಮಕ್ಕಳು ಸಾವು

21/11/2020

ನಾರಾಯಣಪೇಟೆ: ಕೊಳದಲ್ಲಿ ಈಜಲು ಹೋದ ಒಂದೇ ಕುಟುಂಬದ ನಾಲ್ವರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ತೆಲಂಗಾಣದ ನಾರಾಯಣಪೇಟೆ ಜಿಲ್ಲೆಯಲ್ಲಿ ನಡೆದಿದೆ.

ದಾಮರಗಿದ್ದ ವಲಯದ ನಂದಾಯನಾಯಕ ತಾಂಡಾದಲ್ಲಿ ಈ ದುರಂತ ನಡೆದಿದ್ದು, ಗಣೇಶ್, ಅರ್ಜುನ್, ಅರುಣ್ ಮತ್ತು ಪ್ರವೀಣ್ ಎಂಬ ಮಕ್ಕಳು ಕೊಳದಲ್ಲಿ ಈಜುತ್ತಿದ್ದ ಸಂದರ್ಭದಲ್ಲಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ನೀರಲ್ಲಿ ಮುಳುಗಿ ಸಾವನ್ನಪಪ್ಪಿದ ಮಕ್ಕಳು 7ರಿಂದ 11 ವರ್ಷದೊಳಗಿನ ಮಕ್ಕಳಾಗಿದ್ದಾರೆ. ಇನ್ನೂ ಮಕ್ಕಳ ಸಾವಿನ ಸುದ್ದಿ ಸ್ವೀಕರಿಸಲು ಸಾಧ್ಯವಾಗದೇ ಹೆತ್ತವರು ರೋದಿಸುತ್ತಿದ್ದು, ಅವರ ರೋದನ ಮುಗಿಲು ಮುಟ್ಟಿದೆ.

Disclaimer:

www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.

ಇತ್ತೀಚಿನ ಸುದ್ದಿ