ಬೋಟ್ ನ ಫ್ಯಾನ್ ಗೆ ಸಿಲುಕಿದ ಬಲೆ: ಮೀನುಗಾರಿಕಾ ದೋಣಿ ಮುಳುಗಡೆ

boat
25/05/2023

ಕುಂದಾಪುರ: ಮೀನುಗಾರಿಕಾ ಬೋಟೊಂದು ಪಾರಂಪಳ್ಳಿ ಪಡುಕರೆ ಸಮೀಪ ಮೀನುಗಾರಿಕೆ ನಡೆಸುತ್ತಿರುವಾಗ ತೇಲಿ ಬಂದ ಬಲೆಯು ಬೋಟಿನ ಪ್ಯಾನಿಗೆ ಸಿಲುಕಿದ ಪರಿಣಾಮ ಬೋಟ್ ನ ಇಂಜಿನ್ ಸ್ಥಬದ್ದಗೊಂಡು ಗಾಳಿಯ ರಭಸಕ್ಕೆ ಮರಳು ದಿಬ್ಬಕ್ಕೆ ಬಡಿದು ಮುಳುಗಲಾರಂಭಿಸಿದ ಘಟನೆ ನಡೆದಿದೆ.

ಬೆಂಗ್ರೆ ನಿವಾಸಿ ಸಂದೀಪ್ ತೋಳಾರ್ ಮಾಲೀಕತ್ವದ ಶ್ರೀ ದುರ್ಗಾಪರಮೇಶ್ವರಿ ರುಕ್ಮಯ್ಯ ಹೆಸರಿನ ಬೋಟ್ ಇದಾಗಿದ್ದು ಅವಘಡದ ವೇಳೆ ಅಕ್ಕಪಕ್ಕದ ಬೋಟ್ ಗಳು ಸಹಾಯಕ್ಕೆ ಬಂದರೂ ಕೂಡ ಪ್ರಯೋಜನವಾಗಿಲ್ಲ.

ಬೋಟಿನಲ್ಲಿದ್ದ ಕಾರ್ಮಿಕರನ್ನ ಸುರಕ್ಷಿತವಾಗಿ ಬೇರೆ ಬೋಟಿನವರು ದಡಕ್ಕೆ ಸೇರಿಸುವಲ್ಲಿ ಯಶಸ್ವಿಯಾಗಿದ್ದು ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ

ಬೋಟಿನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಮೀನುಗಳು ಹಾಗೂ ಮೀನುಗಾರಿಕೆ ಪರಿಕರಗಳು ಬೋಟಿನೊಂದಿಗೆ ಮುಳುಗಡೆಯಾಗಿದ್ದು ಸುಮಾರು ಅಂದಾಜು 12 ಲಕ್ಷ ರೂ. ನಷ್ಟ ಸಂಭವಿಸಿದೆ ಎಂದು ತಿಳಿದುಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ

Exit mobile version