12:38 AM Friday 11 - September 2026

ನಿದ್ದೆಗೆ ಜಾರಿದ ಕಾರು ಚಾಲಕ:  ಭೀಕರ ಅಪಘಾತದಲ್ಲಿ 7 ಮಂದಿ ಸಾವು

accident
14/01/2022

ದಾವಣಗೆರೆ: ಇಂಡಿಕಾ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿಯಾದ ಪರಿಣಾಮ 7 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲ್ಲೂಕಿನ ಕಣಕಟ್ಟೆ ಟೋಲ್ ಎನ್ ಹೆಚ್ 13ರಲ್ಲಿ ನಡೆದಿದೆ.

ವರದಿಗಳ ಪ್ರಕಾರ ಕಾರು ಚಾಲಕ ಮದ್ಯದ ನಶೆಯಿಂದಾಗಿ ಕಾರು ಚಾಲನೆಯಲ್ಲಿದ್ದಾಗಲೇ ನಿದ್ರೆಗೆ ಜಾರಿದ್ದರಿಂದಾಗಿ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.

ಮೃತರ ಮಲ್ಲನ ಗೌಡ(22), ಸಂತೋಷ್(21), ಸಂಜೀವ್(20), ಜೈಭೀಮ್(18), ರಾಘು(23), ಸಿದ್ದೇಶ್(20), ವೇದಮೂರ್ತಿ(18), ಮೃತಪಟ್ಟವರು ಎಂದು ತಿಳಿದು ಬಂದಿದೆ.

ಮೃತರಲ್ಲಿ 4 ಜನ ಯಾದಗಿರಿಯ ಶಾಹಪುರದವರಾಗಿದ್ದು , 2 ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಮೂಲದವರು, 01 ವಿಜಯಪುರ ಜಿಲ್ಲೆಯ ತಾಳಿಕೋಟೆಯವನೆಂದು ತಿಳಿದುಬಂದಿದೆ.

ಮಾಹಿತಿ ತಿಳಿದು ಘಟನ ಸ್ಥಳಕ್ಕೆ ದಾವಣಗೆರೆ ಎಸ್ಪಿ ಸಿಬಿ ರಿಷ್ಯಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಬೆಳಗಿನ ಜಾವ ಸಂಭವಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ ಎನ್ನಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ರಿಯಾಲಿಟಿ ಶೋ ಸ್ಪರ್ಧಿ ಸಮನ್ವಿ ಸಾವು

ಗಿಳಿ, ಕೌಜುಗ, ಆಮೆ, ಮೊಲ ಮಾರಾಟ ಮಾಡುತ್ತಿದ್ದ ವ್ಯಕ್ತಿ ಅರೆಸ್ಟ್!

ಕಳ್ಳನನ್ನು 1 ಕಿ.ಮೀ. ದೂರ ಬೆನ್ನಟ್ಟಿ ಹಿಡಿದ ಪೊಲೀಸ್ | ವಿಡಿಯೋ ವೈರಲ್

ಅರಣ್ಯ ಪ್ರದೇಶಕ್ಕೆ ಕರೆದೊಯ್ದು ಬಾಲಕಿಯ ಮೇಲೆ ಅತ್ಯಾಚಾರ!

ಮೇಕೆದಾಟು ಪಾದಯಾತ್ರೆಗೆ ನಿರ್ಬಂಧ ವಿಧಿಸಿ ಆದೇಶ

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti deneme bonusu veren siteler deneme bonusu veren siteler
Exit mobile version