11:19 AM Wednesday 20 - August 2025

ರಾಮನ ಅಸ್ತಿತ್ವಕ್ಕೆ ಯಾವುದೇ ಪುರಾವೆಗಳಿಲ್ಲ: ವಿವಾದಕ್ಕೆ ಕಾರಣವಾದ ತಮಿಳುನಾಡು ಸಚಿವರ ಹೇಳಿಕೆ

03/08/2024

ತಮಿಳುನಾಡಿನ ಆಡಳಿತಾರೂಢ ಡಿಎಂಕೆ ತನ್ನ ವಾಟರ್ ಮೌತ್ ನಾಯಕರಿಂದಾಗಿ ಆಗಾಗ್ಗೆ ವಿವಾದಕ್ಕೊಳಗಾಗುತ್ತಿದೆ. ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ಆಗಿರಲಿ ಅಥವಾ ಸಾರಿಗೆ ಸಚಿವ ಎಸ್.ಎಸ್.ಶಿವಶಂಕರ್ ಆಗಿರಲಿ, ಸನಾತನ ಧರ್ಮದ ಬಗ್ಗೆ ಅವರು ಕಾಲಕಾಲಕ್ಕೆ ನೀಡುವ ವಿವಾದಾತ್ಮಕ ಹೇಳಿಕೆಗಳು ಟೀಕೆಗೊಳಗಾಗುತ್ತಿದೆ. ಈಗ ವೈರಲ್ ಆಗಿರುವ ವೀಡಿಯೊದಲ್ಲಿ, ಅರಿಯಲೂರಿನಲ್ಲಿ ನಡೆದ ರಾಜ ರಾಜೇಂದ್ರ ಚೋಳ ಅವರ ಜನ್ಮ ದಿನಾಚರಣೆಯಲ್ಲಿ ಮಾತನಾಡಿದ ಸಚಿವರು, ರಾಜೇಂದ್ರ ಚೋಳನ ಆಳ್ವಿಕೆಯಲ್ಲಿ ನಿರ್ಮಿಸಲಾದ ಕೊಳಗಳು ಮತ್ತು ದೇವಾಲಯಗಳು ರಾಜನು ವಾಸಿಸುತ್ತಿದ್ದನು ಎಂಬುದನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ. “ಆದರೆ ರಾಮ ಅಸ್ತಿತ್ವದಲ್ಲಿದ್ದನೆಂದು ಇತಿಹಾಸದಲ್ಲಿ ಉಲ್ಲೇಖಿಸುವ ಯಾವುದೇ ಪುರಾವೆಗಳಿಲ್ಲ” ಎಂದು ಶಿವಶಂಕರ್ ಈ ಸಂದರ್ಭದಲ್ಲಿ ಹೇಳಿದ್ದಾರೆ.

ಇದು ಬಿಜೆಪಿಯ ತೀವ್ರ ಟೀಕೆಗೆ ಗುರಿಯಾಗಿದೆ. ಡಿಎಂಕೆ ನಾಯಕರು ಹಿಂದೂ ಧರ್ಮದ ವಿರುದ್ಧ ಮಾತನಾಡುವಾಗ, ಅವರು ಇತರ ಯಾವುದೇ ಭಾಷೆಗಳ ಬಗ್ಗೆ ಅದೇ ರೀತಿ ಮಾತನಾಡಲು ಧೈರ್ಯ ಮಾಡುವುದಿಲ್ಲ ಎಂದು ಅದು ಹೇಳಿದೆ. ರಾಮನ ಅಸ್ತಿತ್ವದ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದಕ್ಕಾಗಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಶನಿವಾರ ರಾಜ್ಯ ಸಾರಿಗೆ ಸಚಿವ ಎಸ್.ಎಸ್.ಶಿವಶಂಕರ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಶಿವಶಂಕರ್ ಅವರ ವಿವಾದಾತ್ಮಕ ಹೇಳಿಕೆಯ ವೀಡಿಯೊವನ್ನು ಪೋಸ್ಟ್ ಮಾಡಿದ ಅಣ್ಣಾಮಲೈ, “ಭಗವಾನ್ ಶ್ರೀ ರಾಮ್ ಬಗ್ಗೆ ಡಿಎಂಕೆ ನಾಯಕನ ಹೇಳಿಕೆ ಖಂಡನೀಯ’ ಅಂದಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version