5:38 AM Thursday 16 - October 2025

ಒಡಿಶಾ ರೈಲು ದುರಂತ: ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

05/06/2023

ಒಡಿಶಾ ರೈಲು ದುರಂತಕ್ಕೆ ಸಂಬಂಧಿಸಿದಂತೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ. ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದೆ. ಭಾರತೀಯ ರೈಲ್ವೆಯ ಮೂಲಸೌಕರ್ಯವು ‘ನಿರ್ಲಕ್ಷ್ಯದಡಿಯಲ್ಲಿ ಸೊರಗುತ್ತಿದೆ’ ಎಂದು ವಾಗ್ದಾಳಿ ನಡೆಸಿದೆ.

ಅಲ್ಲದೇ ಈ ಶತಮಾನದ ಈ ‘ಭೀಕರ ರೈಲು ದುರಂತ’ದ ಹೊಣೆಯನ್ನು ಪ್ರಧಾನಿ ತೆಗೆದುಕೊಳ್ಳುತ್ತಾರೆಯೇ ಎಂದು ವಿರೋಧ ಪಕ್ಷ ಕಾಂಗ್ರೆಸ್ ಪ್ರಶ್ನಿಸಿದೆ. ತಜ್ಞರ ಎಚ್ಚರಿಕೆಗಳು ಮತ್ತು ಸಲಹೆಗಳು, ಸಂಸದೀಯ ಸಮಿತಿ ಮತ್ತು ಸಿಎಜಿ ವರದಿಯನ್ನು ನಿರ್ಲಕ್ಷಿಸಲು ಯಾರು ಜವಾಬ್ದಾರರು ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ರೈಲ್ವೆ ಸುರಕ್ಷತೆಯ ಬಗ್ಗೆ ಗಮನ ಹರಿಸದೆ ಮೋದಿಯವರು ರೈಲುಗಳಿಗೆ ಹಸಿರು ನಿಶಾನೆ ತೋರಿಸುವಲ್ಲಿ ಬ್ಯುಸಿಯಾಗಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಭವಿಷ್ಯದಲ್ಲಿ ಇಂತಹ ಘಟನೆಗಳನ್ನು ತಡೆಗಟ್ಟಲು ಮೇಲಿನಿಂದ ಕೆಳಗಿನವರೆಗೆ ಎಲ್ಲಾ ಹುದ್ದೆಗಳ ಉತ್ತರದಾಯಿತ್ವವನ್ನು ನಿಗದಿಪಡಿಸುವಂತೆ ಅವರು ಕರೆ ನೀಡಿದ್ದಾರೆ.

ಇನ್ನು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಕೂಡ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಪ್ರಧಾನಿ ಕೂಡಲೇ ರೈಲ್ವೆ ಸಚಿವರ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.
‘270 ಕ್ಕೂ ಹೆಚ್ಚು ಸಾವುಗಳ ನಂತರವೂ ಉತ್ತರದಾಯಿತ್ವವಿಲ್ಲ. ಇಂತಹ ನೋವಿನ ಅಪಘಾತದ ಜವಾಬ್ದಾರಿಯನ್ನು ಹೊತ್ತು ಮೋದಿ ಸರ್ಕಾರ ಓಡಿಹೋಗಲು ಸಾಧ್ಯವಿಲ್ಲ’ ಎಂದು ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ:https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version