ವಿಧಾನಸಭಾ ಚುನಾವಣಾ ತರಬೇತಿಗೆ ಆಗಮಿಸಿದ್ದ ಅಧಿಕಾರಿ ಹೃದಯಾಘಾತದಿಂದ ಸಾವು

ಹನೂರು: ವಿಧಾನಸಭಾ ಚುನಾವಣೆ ನಿಮಿತ್ತ ತರಬೇತಿಗೆ ಆಗಮಿಸಿದ್ದ ಜಗದೀಶ್(40) ಎಂಬುವವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಪಟ್ಟಣದ ವಿವೇಕನಂದಾ ಶಾಲೆಯಲ್ಲಿ ಮಂಗಳವಾರ ಎಆರ್ ಓ ಹಾಗೂ ಪಿಆರ್ ಓಗಳಿಗೆ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ತರಬೇತಿ ಆರಂಭವಾಗುತ್ತಿದ್ದಂತೆ ಜಗದೀಶ್ ಎದೆನೋವಿನಿಂದ ಕುಸಿದು ಬಿದ್ದಿದ್ದಾರೆ.
ಕೂಡಲೇ ಅವರನ್ನು ಹೋಲಿಕ್ರಾಸ್ ಆಸ್ಪತ್ರೆಗೆ ಸಾಗಿಸುವ ಮಧ್ಯೆ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಜಿಲ್ಲಾಧಿಕಾರಿ ಡಿ.ಎಸ್ ರಮೇಶ್ ಬೇಟಿ ನೀಡಿ ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw