3:06 AM Friday 11 - September 2026

ಬಿಗ್ ಬ್ರೇಕಿಂಗ್ ನ್ಯೂಸ್:  ಚಾಮರಾಜನಗರ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆಗೆ  24 ಮಂದಿ ಬಲಿ  

chamarajanagara hospital
03/05/2021

ಚಾಮರಾಜನಗರ: ಜಿಲ್ಲಾ ಕೊವಿಡ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಖಾಲಿಯಾಗಿ ಸಾವನ್ನಪ್ಪಿದವರು ಮೂವರಲ್ಲ ಒಟ್ಟು 24 ಮಂದಿ ಸಾವನ್ನಪ್ಪಿದ್ದಾರೆ ಎನ್ನುವ ಅಧಿಕೃತ ಮಾಹಿತಿ ಹೊರ ಬಿದ್ದಿದೆ ಎಂದು ವರದಿಯಾಗಿದೆ.

ನಿನ್ನೆ ರಾತ್ರಿ 16 ಮಂದಿ ಹಾಗೂ ಬೆಳಗ್ಗಿನ ಜಾವ 6ಕ್ಕೂ ಅಧಿಕ ಜನರು ಆಕ್ಸಿಜನ್ ಕೊರತೆಯಿಂದ ಬಲಿಯಾಗಿದ್ದಾರೆ ಎಂದು ಹೇಳಲಾಗಿದ್ದು,  ಆರೋಗ್ಯ ಇಲಾಖೆ ಇದನ್ನು ಖಚಿತ ಪಡಿಸಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿದ ಸಂಬಂಧಿಕರು ಜಿಲ್ಲಾಸ್ಪತ್ರೆ ಮುಂದೆ ರೋದಿಸುತ್ತಿದ್ದು, ಜಿಲ್ಲಾಡಳಿತ ಹಾಗೂ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಿಲ್ಲಾಸ್ಪತ್ರೆಯಲ್ಲಿ ಎಲ್ಲ ಆಕ್ಸಿಜನ್ ಸಿಲಿಂಡರ್ ಗಳು ಖಾಲಿಯಾಗಿತ್ತು. ಇದರಿಂದ ಮೂವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.  ಆಕ್ಸಿಜನ್ ಖಾಲಿಯಾಗಿ ಉಸಿರಾಟಕ್ಕೆ ಪರದಾಡುತ್ತಿದ್ದ ರೋಗಿಗಳ ಕುಟುಂಬಸ್ಥರು ಬಟ್ಟೆಯಿಂದ ಗಾಳಿ ಬೀಸಿ ಅವರನ್ನು ಉಳಿಸಿಕೊಳ್ಳುವ ಪ್ರಯತ್ನ, ರಾಜ್ಯದ ವೈದ್ಯಕೀಯ ಕ್ಷೇತ್ರದ ವೈಫಲ್ಯದ ಸ್ಥಿತಿಗೆ ಸಾಕ್ಷಿಯಾಗಿ ಮನಕಲಕುವಂತಿತ್ತು.

ಮೈಸೂರಿನಿಂದ  ಆಕ್ಸಿಜನ್ ಸಿಲಿಂಡರ್ ಪೂರೈಕೆಯಾಗದೇ ಇರುವುದರಿಂದ ಈ ಸಮಸ್ಯೆ ಉಂಟಾಗಿದೆ ಎಂದು ಹೇಳಲಾಗಿದೆ. ಕೊನೆಗೆ ಸಂಸದ ಪ್ರತಾಪ್ ಸಿಂಹ 50 ಜಂಬೂ ಸಿಲಿಂಡರ್ ಆಕ್ಸಿಜನ್ ಕಳುಹಿಸಿದ್ದಾರೆ. ಆದರೆ ಒಂದು ರಾತ್ರಿಗೆ 150 ಜಂಬೂ ಸಿಲಿಂಡರ್ ಗಳ ಅವಶ್ಯಕತೆ ಇದ್ದು, ಪ್ರತಾಪ್ ಸಿಂಹ ಕಳುಹಿಸಿದ ಆಕ್ಸಿಜನ್ ಒಂದು ರಾತ್ರಿಗೆ ಕೂಡ ಸಾಕಾಗುವುದಿಲ್ಲ  ಎಂದು ಹೇಳಲಾಗಿದೆ.

ಮೈಸೂರಿನ ಸದರನ್ ಗ್ಯಾಸ್ ಏಜೆನ್ಸಿ ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಆಕ್ಸಿಜನ್ ಪೂರೈಸುತ್ತಿತ್ತು. ಜಿಲ್ಲಾಸ್ಪತ್ರೆಗೆ 280 ಜಂಬೂ ಆಕ್ಸಿಜನ್ ಬೇಕಾಗಿದೆ. ಆದರೆ ಮೈಸೂರಿನಿಂದ ಸದ್ಯ 50 ಜಂಬೂ ಸಿಲಿಂಡರ್ ವಿತರಣೆ ಮಾಡಲಾಗಿದೆ. ಚಾಮರಾಜನಗರ ಸಂಸದರು ಎಲ್ಲಿದ್ದಾರೆ ಎಂದು ಜನ ಪ್ರಶ್ನಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti deneme bonusu veren siteler deneme bonusu veren siteler
Exit mobile version