ಪಕ್ಷ ಏನೇ ತೀರ್ಮಾನ ತೆಗೆದುಕೊಂಡರೂ ಅದಕ್ಕೆ ಬದ್ಧ ಎಂದ ಈಶ್ವರಪ್ಪ! - Mahanayaka
6:42 PM Thursday 15 - January 2026

ಪಕ್ಷ ಏನೇ ತೀರ್ಮಾನ ತೆಗೆದುಕೊಂಡರೂ ಅದಕ್ಕೆ ಬದ್ಧ ಎಂದ ಈಶ್ವರಪ್ಪ!

eshwarappa
29/12/2021

ಬೆಂಗಳೂರು: ಸಚಿವ ಸಂಪುಟದಲ್ಲಿ ಬದಲಾವಣೆ ವಿಚಾರ ಇದೀಗ ಬಿಜೆಪಿಯಲ್ಲಿ ಮತ್ತೊಮ್ಮೆ ಸದ್ದು ಮಾಡುತ್ತಿದ್ದು, ಹೊನ್ನಾಳಿ ಶಾಸಕ ಎಮ್ ಪಿ ರೇಣುಕಾಚಾರ್ಯ ಕಿರಿಯರಿಗೆ ಸಂಪುಟದಲ್ಲಿ ಅವಕಾಶ ನೀಡಬೇಕು ಎನ್ನುವ ಹೇಳಿಕೆ ನೀಡಿದ ಬಳಿಕ ಹೊಸ ಚರ್ಚೆಗಳು ಆರಂಭವಾಗಿದೆ.

ಸಚಿವ ಸಂಪುಟ ವಿಸ್ತರಣೆಯಾದರೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಕುರ್ಚಿ ಅಲುಗಾಡಲಿದೆ ಎನ್ನುವ ಮಾತುಗಳು ಇದೀಗ ಕೇಳಿ ಬಂದಿದ್ದು, ಈ ಸಂಬಂಧ  ಹೇಳಿಕೆ ನೀಡಿರುವ ಕೆ.ಎಸ್.ಈಶ್ವರಪ್ಪ ಪಕ್ಷ ಏನೇ ತೀರ್ಮಾನ ತೆಗೆದುಕೊಂಡರೂ ತಾವು ಅದಕ್ಕೆ ಬದ್ಧರಾಗಿರುವುದಾಗಿ ಹೇಳಿದ್ದಾರೆ.

ಸಚಿವ ಸ್ಥಾನ ಕಳೆದುಕೊಳ್ಳಲು ಯಾರು ತಾನೆ ಇಷ್ಟಪಟ್ಟಾರು ಮಾರಾಯ್ರೇ? ಎಂದು ಪ್ರಶ್ನಿಸಿರುವ ಈಶ್ವರಪ್ಪ, ಪಕ್ಷ ಏನೇ ತೀರ್ಮಾನ ತೆಗೆದುಕೊಂಡರೂ ಅದಕ್ಕೆ ಬದ್ಧನಾಗಿರುವುದಾಗಿ ಹುಬ್ಬಳ್ಳಿಯಲ್ಲಿ ಹೇಳಿಕೆ ನೀಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮಂಗಳೂರು: ಧಾರ್ಮಿಕ ಕೇಂದ್ರಗಳ ಕಾಣಿಕೆ ಡಬ್ಬಿಗಳಿಗೆ ಕಾಂಡೋಮ್ ಹಾಕುತ್ತಿದ್ದ ವ್ಯಕ್ತಿ ಅರೆಸ್ಟ್

ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ಬಲೆಗೆ ಬಿದ್ದ ಲೈನ್ ಮ್ಯಾನ್!

“ಡಿಸೆಂಬರ್ 31ರಂದು ಕರ್ನಾಟಕ ಬಂದ್ ಫಿಕ್ಸ್, ಬದಲಾವಣೆಯ ಮಾತೇ ಇಲ್ಲ”

ಹೊತ್ತಿ ಉರಿದ ಮನೆ: ಒಂದೇ ಕುಟುಂಬದ ಐವರು ಮಕ್ಕಳ ದಾರುಣ ಸಾವು

ಬಿಜೆಪಿಗೆ ವೋಟು ಹಾಕಿದರೆ 50 ರೂಪಾಯಿಗೆ ಮದ್ಯ ಕೊಡುತ್ತೇವೆ | ಬಿಜೆಪಿ ನಾಯಕ ಹೇಳಿಕೆ

ಇತ್ತೀಚಿನ ಸುದ್ದಿ