ನಾಳೆಯಿಂದ ಪಂಚರತ್ನ ರಥಯಾತ್ರೆ ಪುನಾರಂಭ: ಭದ್ರಾವತಿಯಿಂದ 9 ಕ್ಷೇತ್ರಗಳಲ್ಲಿ ರಥಯಾತ್ರೆ - Mahanayaka
5:35 PM Saturday 24 - January 2026

ನಾಳೆಯಿಂದ ಪಂಚರತ್ನ ರಥಯಾತ್ರೆ ಪುನಾರಂಭ: ಭದ್ರಾವತಿಯಿಂದ 9 ಕ್ಷೇತ್ರಗಳಲ್ಲಿ ರಥಯಾತ್ರೆ

kumaraswamy
20/02/2023

ಬೆಂಗಳೂರು: ಮಹಾ ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಕಾಲ ಪಂಚರತ್ನ ರಥಯಾತ್ರೆಗೆ ಬ್ರೇಕ್ ತೆಗೆದುಕೊಂಡಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಮಂಗಳವಾರದಿಂದ (ಫೆ.21) ರಥಯಾತ್ರೆಯನ್ನು ಮರು ಆರಂಭ ಮಾಡುತ್ತಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಕ್ಷೇತ್ರದಿಂದ ರಥಯಾತ್ರೆ ಶುರುವಾಗಿದ್ದು, 22ರಂದು ಶಿವಮೊಗ್ಗ ಗ್ರಾಮಾಂತರ, 23ರಂದು ಶಿವಮೊಗ್ಗ ಗ್ರಾಮಾಂತರ ಹಾಗೂ ಸೊರಬ, 24ರಂದು ಯಲ್ಲಾಪುರ ಮತ್ತು ತೀರ್ಥಹಳ್ಳಿ, 25ರಂದು ತೀರ್ಥಹಳ್ಳಿ ಹಾಗೂ ಕೊಪ್ಪ, 26ರಂದು ಶೃಂಗೇರಿ, ಕೊಪ್ಪ, 28ಕ್ಕೆ ಚಿಕ್ಕಮಗಳೂರು ಹಾಗೂ ಮಾರ್ಚ್ 1ರಂದು ಮೂಡಿಗೆರೆ ಕ್ಷೇತ್ರಗಳಲ್ಲಿ ಪಂಚರತ್ನ ರಥಯಾತ್ರೆ ನಡೆಯಲಿದೆ.

ಈ ತಿಂಗಳ 27ರಂದು ಪಕ್ಷದ ಬೃಹತ್ ಸಮಾವೇಶ ಇದ್ದು, ಅಂದು ಪಂಚರತ್ನ ರಥಯಾತ್ರೆಗೆ ಬಿಡುವು ಕೊಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಅವರು ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ