12:49 PM Wednesday 9 - September 2026

ಪರಪ್ಪನ ಅಗ್ರಹಾರ ಕಾರಗೃಹದ ಮೇಲೆ ಸಿಸಿಬಿ ದಾಳಿ: ಕೈದಿಗಳಿಂದ ಪೊಲೀಸರು ಏನೇನು ವಶಪಡಿಸಿಕೊಂಡಿದ್ದಾರೆ ಗೊತ್ತಾ?

parappana agrahara
10/07/2021

ಬೆಂಗಳೂರು: ನಗರದ ಪರಪ್ಪನ ಅಗ್ರಹಾರ ಕಾರಗೃಹದ ಮೇಲೆ ಸಿಸಿಬಿ ಪೊಲೀಸರು ಶನಿವಾರ ದಿಢೀರ್ ದಾಳಿ ನಡೆಸಿದ್ದು, ಈ ವೇಳೆ ಕೈದಿಗಳ ಬಳಿಯಲ್ಲಿ ಮೊಬೈಲ್ ಗಳು, ಸಿಮ್ ಕಾರ್ಡ್ ಗಳು, ಗಾಂಜಾ, ಚಾಕು ಸೇರಿದಂತೆ ಹಲವು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

 

ಕಾರಾಗೃಹದಲ್ಲಿರುವ ಕೈದಿಗಳು ಮೊಬೈಲ್ ಬಳಸುತ್ತಿದ್ದಾರೆ, ಅಲ್ಲಿಂದಲೇ ಅಪರಾಧ ಕೃತ್ಯಗಳನ್ನು ಎಸಗಲು ಸಂಚು ರೂಪಿಸುತ್ತಿದ್ದಾರೆ, ಮಾದಕ ವಸ್ತುಗಳನ್ನು ಸೇವಿಸುತ್ತಿದ್ದಾರೆ ಎನ್ನುವ ಮಾಹಿತಿಯ ಹಿನ್ನೆಲೆಯಲ್ಲಿ ಈ ದಾಳಿ ನಡೆಸಿದೆ ಎಂದು ಹೇಳಲಾಗಿದೆ.

 

ಜೈಲಿನ ಹೊರಗಿನಿಂದ ಕೈದಿಗಳಿಗೆ ಮಾದಕ ವಸ್ತುಗಳು ಪೂರೈಕೆ ಆಗುತ್ತಿರುವುದು ತಿಳಿದು ಬಂದಿದೆ ಎಂದು ಹೇಳಲಾಗಿದ್ದು, ಈ ಸಂಬಂಧ ಜೈಲು ಸಿಬ್ಬಂದಿಯನ್ನು ಸಿಸಿಬಿ ಪೊಲೀಸರು ವಿಚಾರಣೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

 

ಇನ್ನೂ ಬೆಂಗಳೂರಿನ ಕೆಲವು ರೌಡಿಗಳ ಮನೆಗಳ ಮೇಲೆಯೂ ಪೊಲೀಸರು ದಾಳಿ ನಡೆಸಿದ್ದಾರೆನ್ನಲಾಗಿದ್ದು, ಮಾರಕಾಸ್ತ್ರಗಳು ಹಾಗೂ ಹಲವು ವಸ್ತುಗಳನ್ನು ಜಪ್ತಿ ಮಾಡಿದ್ದಾರೆ ಎಂದು ವರದಿಯಾಗಿದೆ.

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti
Exit mobile version