ಪರೀಕ್ಷೆಯಲ್ಲಿ ಫೇಲ್ ಆಗುವ ಭೀತಿ: ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ! - Mahanayaka

ಪರೀಕ್ಷೆಯಲ್ಲಿ ಫೇಲ್ ಆಗುವ ಭೀತಿ: ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ!

siddapura
02/07/2022

ಸಿದ್ದಾಪುರ: ಪಿಯು ಪೂರಕ ಪರೀಕ್ಷೆಯಲ್ಲಿ ಫೇಲ್ ಆಗುವ ಭೀತಿಯಿಂದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.


Provided by

17 ವರ್ಷ ವಯಸ್ಸಿನ  ಮಾನಸ ಆತ್ಮಹತ್ಯೆಗೆ ಶರಣಾದ ಬಾಲಕಿಯಾಗಿದ್ದು, ಈಕೆ ಶಂಕರನಾರಾಯಣ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಕಲಿಯುತ್ತಿದ್ದಳು ಎನ್ನಲಾಗಿದೆ.

ಜೂನ್ ತಿಂಗಳ ಸಪ್ಲಿಮೆಂಟರಿ ಪರೀಕ್ಷೆ ಕಟ್ಟಿದ್ದು, ತಾನು ಪರೀಕ್ಷೆಯಲ್ಲಿ ಅನುತ್ತೀರ್ಣಳಾಗಬಹುದು ಎಂದು ಹೆದರಿ ಮನೆಯ ಎದುರಿನ ಕೊಟ್ಟಿಗೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ.

ಘಟನೆ ಸಂಬಂಧ ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಅನಾರೋಗ್ಯದಿಂದ ಬೇಸತ್ತು ಪುಟ್ಟ ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದ ಮಹಿಳೆ

ರೇಬಿಸ್ ನಿಂದ ಬಳಲುತ್ತಿದ್ದ ಯುವತಿ ದಾರುಣ ಸಾವು!

ಪ್ರಿಯಕರ ಜೊತೆ ಓಡಿ ಹೋದ ಪತ್ನಿ ಮೇಲಿನ ಕೋಪದಿಂದ ಇಬ್ಬರು ಮಕ್ಕಳನ್ನು ಕೊಂದ ಪಾಪಿ

ರೋಡು ತೋಡಾಯಿತು: ಮಂಗಳೂರಿನ ಕೊಟ್ಟಾರ ಚೌಕಿಯಲ್ಲಿ ವಿದ್ಯಾರ್ಥಿಗಳು ರಸ್ತೆ ದಾಟಿದ್ದು ಹೀಗೆ

ಮಂಗಳೂರಿನಲ್ಲಿ ಭಾರೀ ಮಳೆಗೆ ಜನಜೀವನ ಅಸ್ತವ್ಯವಸ್ತ! | ಶಾಲೆಗಳಿಗೆ ರಜೆ ಇದೆಯೇ?

 

ಇತ್ತೀಚಿನ ಸುದ್ದಿ