ಪರೇಶ್ ಮೇಸ್ತಾ ಸಾವು ಕೊಲೆಯಲ್ಲ, ಆಕಸ್ಮಿಕ: ತನಿಖಾ ವರದಿ ಸಲ್ಲಿಸಿದ ಸಿಬಿಐ - Mahanayaka

ಪರೇಶ್ ಮೇಸ್ತಾ ಸಾವು ಕೊಲೆಯಲ್ಲ, ಆಕಸ್ಮಿಕ: ತನಿಖಾ ವರದಿ ಸಲ್ಲಿಸಿದ ಸಿಬಿಐ

paresh mesta
03/10/2022


Provided by

ಕಾರವಾರ:  ಪರೇಶ್ ಮೇಸ್ತಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಹೊನ್ನಾವರ ನ್ಯಾಯಾಲಯಕ್ಕೆ ತನಿಖಾ ವರದಿಯನ್ನು ಸಲ್ಲಿಸಿದ್ದು,  ಇದೊಂದು ಆಕಸ್ಮಿಕ ಸಾವು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

2017ರ ಡಿಸೆಂಬರ್ 6ರಂದು ಈ ಘಟನೆ ನಡೆದಿತ್ತು. ಹೊನ್ನಾವರದಲ್ಲಿ ನಡೆದ ಗಲಭೆಯಲ್ಲಿ ಪರೇಶ್ ಮೇಸ್ತಾ ಎಂಬ ಯುವಕ ನಾಪತ್ತೆಯಾಗಿದ್ದು, ಬಳಿಕ ಡಿಸೆಂಬರ್ 8ರಂದು ಹೊನ್ನಾವರದಲ್ಲಿ ಈತನ ಮೃತದೇಹ ಪತ್ತೆಯಾಗಿತ್ತು.

ಈ ಪ್ರಕರಣ ರಾಜಕೀಯ ಬಣ್ಣ ಪಡೆದುಕೊಂಡ ಬಳಿಕ ಪ್ರಕರಣದಲ್ಲಿ 5 ಮಂದಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿತ್ತು. ಅಂದಿನ ಸಿಎಂ ಸಿದ್ದರಾಮಯ್ಯನವರು ಈ ಪ್ರಕರಣವನ್ನು ಸಿಬಿಐಗೆ ವಹಿಸಿದ್ದರು. ಇದೀಗ ತನಿಖಾ ವರದಿಯನ್ನು ಸಿಬಿಐ ಹೊನ್ನಾವರ ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಇದೊಂದು ಆಕಸ್ಮಿಕ ಸಾವು, ಕೊಲೆಯಲ್ಲ ಎಂದು ಸಿಬಿಐ ಅಭಿಪ್ರಾಯಪಟ್ಟಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ