ಪಿಸ್ತೂಲ್  ಹಿಡಿದುಕೊಂಡು ಮತಗಟ್ಟೆಗೆ ಬಂದ ಚುನಾವಣಾಧಿಕಾರಿ - Mahanayaka

ಪಿಸ್ತೂಲ್  ಹಿಡಿದುಕೊಂಡು ಮತಗಟ್ಟೆಗೆ ಬಂದ ಚುನಾವಣಾಧಿಕಾರಿ

22/12/2020

ಬೆಳಗಾವಿ: ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಚುನಾವಣಾಧಿಕಾರಿ ಲೋಡೆಡ್ ಪಿಸ್ತೂಲ್ ಹಿಡಿದುಕೊಂಡು  ಮತಗಟ್ಟೆ ಕರ್ತವ್ಯಕ್ಕೆ ಆಗಮಿಸಿದ ಘಟನೆ ನಡೆದಿದ್ದು, ಅಧಿಕಾರಿಯನ್ನು  ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಳಗಾವಿ ತಾಲೂಕಿನ ದೇವಸೂರ ಗ್ರಾಮದ ಮತಗಟ್ಟೆಗೆ ಪಿಆರ್ ಪಿ ಆಗಿ ನಿಯೋಜನೆಗೊಂಡಿದ್ದ ಅಧಿಕಾರಿ ಸುಲೇಮಾನ್ ಸನದಿ ಬಳಿಯಲ್ಲಿ ನಿನ್ನೆ ರಾತ್ರಿ ಪಿಸ್ತೂಲ್ ಪತ್ತೆಯಾಗಿತ್ತು.  ಈ ಪಿಸ್ತೂಲ್ ಲೈಸೆನ್ಸ್ ಇರುವ ಪಿಸ್ತೂಲ್ ಆಗಿದೆ ಎಂದು ಹೇಳಲಾಗಿದೆ.

ಸುಲೇಮಾನ್ ಅವರಲ್ಲಿ ಪಿಸ್ತೂಲ್ ಗಮನಿಸಿ ಚುನಾವಣಾ ಸಿಬ್ಬಂದಿ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.  ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಪೊಲೀಸರು ಅಧಿಕಾರಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.  ಯಾವುದೇ ಅನಾಹುತ ನಡೆಯ ಬಾರದು ಎನ್ನುವ ನಿಟ್ಟಿನಲ್ಲಿ ಈ ಮತಗಟ್ಟೆ ಪಿಆರ್ ಓ ಬದಲಾವಣೆ ಮಾಡಲಾಗಿದೆ.

Disclaimer:

www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.

ಇತ್ತೀಚಿನ ಸುದ್ದಿ