ಪ್ರಧಾನಿ ಮೋದಿ ಗಾಬರಿಗೊಂಡಿದ್ದಾರೆ: ಪಶ್ಚಿಮ ಬಂಗಾಳದ ಕಾಂಗ್ರೆಸ್ ಮುಖ್ಯಸ್ಥ ಅಧೀರ್ ರಂಜನ್ ಚೌಧರಿ ವ್ಯಂಗ್ಯ - Mahanayaka

ಪ್ರಧಾನಿ ಮೋದಿ ಗಾಬರಿಗೊಂಡಿದ್ದಾರೆ: ಪಶ್ಚಿಮ ಬಂಗಾಳದ ಕಾಂಗ್ರೆಸ್ ಮುಖ್ಯಸ್ಥ ಅಧೀರ್ ರಂಜನ್ ಚೌಧರಿ ವ್ಯಂಗ್ಯ

09/05/2024

ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ಪಶ್ಚಿಮ ಬಂಗಾಳದ ಕಾಂಗ್ರೆಸ್ ಮುಖ್ಯಸ್ಥ ಅಧೀರ್ ರಂಜನ್ ಚೌಧರಿ, ಲೋಕಸಭಾ ಚುನಾವಣೆಯ ಮೂರು ಹಂತಗಳ ಮತದಾನದ ಅನಂತರ ಅವರು ಗಾಬರಿಗೊಂಡಿದ್ದಾರೆ, ಇನ್ನೆಂದಿಗೂ ಎನ್‌ಡಿಎ ಮೈತ್ರಿಕೂಟ 400 ಸ್ಥಾನಗಳನ್ನು ಗೆಲ್ಲುವ ಕುರಿತು ಪ್ರಧಾನಿ ಮೋದಿ ಮಾತನಾಡುವುದಿಲ್ಲ ಎಂದು ಗೇಲಿ ಮಾಡಿದ್ದಾರೆ.

ಆಜ್‌ತಕ್/ಇಂಡಿಯಾ ಟುಡೆ ಸುದ್ದಿ ಸಂಸ್ಥೆಗಳಿಗೆ ಸಂದರ್ಶನ ನೀಡಿರುವ ಅಧೀರ್ ರಂಜನ್ ಚೌಧರಿ, “ಪ್ರಧಾನಿಯು ಗಾಬರಿಗೊಂಡಿದ್ದಾರೆ. ಅವರನ್ನ ಎಂದಿಗೂ 400 ಸ್ಥಾನಗಳನ್ನು ಗೆಲ್ಲುವ ಕುರಿತು ಮಾತನಾಡುವುದಿಲ್ಲ. ಅವರೀಗ ಮೌನಗೊಂಡಿದ್ದಾರೆ” ಎಂದು ಹೇಳಿದ್ದಾರೆ.

1999ರಿಂದ ಬೆಹರಂಪುರ್ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಾ ಬರುತ್ತಿರುವ ಅಧೀರ್ ರಂಜನ್ ಚೌಧರಿ, ಸತತ ಆರನೆಯ ಬಾರಿಯೂ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದು, ತಮಗೆ ಯಾವುದೇ ಸ್ಪರ್ಧೆಯಿದೆ ಎಂಬ ಮಾತನ್ನು ತಳ್ಳಿ ಹಾಕಿದ್ದಾರೆ.

ಅಧೀರ್ ರಂಜನ್ ಚೌಧರಿ ವಿರುದ್ಧ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಪಕ್ಷವು ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್‌ರನ್ನು ಕಣಕ್ಕಿಳಿಸಿದ್ದರೆ, ಬಿಜಿಪಿ ಅಭ್ಯರ್ಥಿಯಾಗಿ ನಿರ್ಮಲ್ ಕುಮಾರ್ ಸಹಾ ಸ್ಪರ್ಧಿಸುತ್ತಿದ್ದಾರೆ.
ಬೆಹರಂಪುರ್ ಲೋಕಸಭಾ ಕ್ಷೇತ್ರದಲ್ಲಿ ಮೇ 13ರಂದು ನಡೆಯಲಿರುವ ನಾಲ್ಕನೆಯ ಹಂತದ ಚುನಾವಣೆಯಲ್ಲಿ ಮತದಾನ ನಡೆಯಲಿದ್ದು, ಜೂನ್ 4ರಂದು ಫಲಿತಾಂಶ ಪ್ರಕಟವಾಗಲಿದೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ