11:56 PM Saturday 25 - October 2025

ಪ್ರಧಾನಿ ಬಾಹ್ಯಾಕಾಶಕ್ಕೆ ಹೋಗುವ ಮುನ್ನ ಮಣಿಪುರಕ್ಕೆ ಹೋಗಲಿ: ಜೈರಾಮ್ ರಮೇಶ್ ವಾಗ್ದಾಳಿ

04/07/2024

ಭಾರತದ ಮೊದಲ ಮಾನವ ಸಹಿತ ಬಾಹ್ಯಾಕಾಶ ಮಿಷನ್‌ಗೆ ಪ್ರಧಾನಿ ನರೇಂದ್ರ ಮೋದಿ ಅಭ್ಯರ್ಥಿಯಾಗಬಹುದು ಎಂಬ ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ್ ಹೇಳಿದ್ದಾರೆ.

ಇದನ್ನೇ ಉಲ್ಲೇಖಿಸಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ವಕ್ತಾರ ಜೈರಾಮ್ ರಮೇಶ್, “ಜೈವಿಕವಲ್ಲದ ಪ್ರಧಾನಿ ಬಾಹ್ಯಾಕಾಶಕ್ಕೆ ಹೋಗುವ ಮುನ್ನ ಮಣಿಪುರಕ್ಕೆ ಹೋಗಬೇಕು” ಎಂದು ಹೇಳಿದ್ದಾರೆ.

2025ರಲ್ಲಿ ಉಡಾವಣೆಯಾಗಲಿರುವ ಭಾರತದ ಮೊದಲ ಮಾನವಸಹಿತ ಬಾಹ್ಯಾಕಾಶ ಮಿಷನ್ ‘ಗಗನಯಾನ’ಕ್ಕೆ ಪ್ರಧಾನಿ ಮೋದಿ ಅಭ್ಯರ್ಥಿಯಾಗಬಹುದು ಎಂಬ ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ್ ಹೇಳಿದ್ದಾರೆಂಬ ಮಾಧ್ಯಮ ವರದಿ ಉಲ್ಲೇಖಿಸಿರುವ ಜೈ ರಾಮ್‌ ರಮೇಶ್‌, “ಅವರು ಬಾಹ್ಯಾಕಾಶಕ್ಕೆ ಹೋಗುವ ಮೊದಲು, ಜೈವಿಕವಲ್ಲದ ಪ್ರಧಾನ ಮಂತ್ರಿ ಮಣಿಪುರಕ್ಕೆ ಹೋಗಬೇಕು” ಎಂದು ಎಕ್ಸ್‌ನಲ್ಲಿ ಬರೆದಿದ್ದಾರೆ.

2023ರ ಮೇ ತಿಂಗಳಿನಿಂದ ಈಶಾನ್ಯ ರಾಜ್ಯ ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ನಡೆಯುತ್ತಿದೆ. ಈವರೆಗೂ ಕೂಡಾ ಮಣಿಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡದಿರುವುದು, ಮಾತನಾಡದಿರುವುದನ್ನು ವಿಪಕ್ಷಗಳು ನಿರಂತರವಾಗಿ ಟೀಕಿಸುತ್ತಾ ಬಂದಿದೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version