ಕಾರ್ಗಿಲ್ ದಿವಸ್ ಆಚರಣೆ: ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ ಪ್ರಧಾನಿ; ಭಯೋತ್ಪಾದನೆಯನ್ನು ಪೂರ್ಣ ಬಲದಿಂದ ಹತ್ತಿಕ್ಕುತ್ತೇವೆ ಎಂದ ಮೋದಿ - Mahanayaka
3:39 PM Friday 11 - September 2026

ಕಾರ್ಗಿಲ್ ದಿವಸ್ ಆಚರಣೆ: ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ ಪ್ರಧಾನಿ; ಭಯೋತ್ಪಾದನೆಯನ್ನು ಪೂರ್ಣ ಬಲದಿಂದ ಹತ್ತಿಕ್ಕುತ್ತೇವೆ ಎಂದ ಮೋದಿ

26/07/2024

ಜಮ್ಮು ಮತ್ತು ಕಾಶ್ಮೀರದಲ್ಲಿ ಹೆಚ್ಚುತ್ತಿರುವ ಭಯೋತ್ಪಾದಕ ದಾಳಿಯ ಮಧ್ಯೆ ಕಾರ್ಗಿಲ್ ವಿಜಯ ದಿನದಂದು ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನಕ್ಕೆ ಕಠಿಣ ಎಚ್ಚರಿಕೆ ನೀಡಿದ್ದಾರೆ.

ಭಾರತವು ಭಯೋತ್ಪಾದಕ ಸವಾಲನ್ನು ಸೋಲಿಸುತ್ತದೆ ಎಂದು ಹೇಳಿದ್ದಾರೆ. ಕಾರ್ಗಿಲ್ ಯುದ್ಧ ಸ್ಮಾರಕದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಭಾರತವು 25 ವರ್ಷಗಳ ಹಿಂದೆ ಕಾರ್ಗಿಲ್ ಯುದ್ಧವನ್ನು ಗೆದ್ದಿದ್ದು ಮಾತ್ರವಲ್ಲದೇ “ಸತ್ಯ, ಸಂಯಮ ಮತ್ತು ಶಕ್ತಿ” ಯ ಅದ್ಭುತ ಉದಾಹರಣೆಯನ್ನು ನೀಡಿದೆ ಎಂದು ಹೇಳಿದರು.

ಪಾಕಿಸ್ತಾನವು ಈ ಹಿಂದೆ ತನ್ನ ಎಲ್ಲಾ ದುಷ್ಕೃತ್ಯಗಳಲ್ಲಿ ವಿಫಲವಾಗಿದೆ. ಆದರೆ ಭಯೋತ್ಪಾದನೆ ಮತ್ತು ಪರೋಕ್ಷ ಯುದ್ಧದ ಸಹಾಯದಿಂದ ತನ್ನನ್ನು ಪ್ರಸ್ತುತಪಡಿಸಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದರು.
ಪಾಕಿಸ್ತಾನ ತನ್ನ ಇತಿಹಾಸದಿಂದ ಏನನ್ನೂ ಕಲಿತಿಲ್ಲ. ಇಂದು ನಾನು ಭಯೋತ್ಪಾದನೆಯ ಮಾಸ್ಟರ್ಸ್ ನನ್ನ ಧ್ವನಿಯನ್ನು ನೇರವಾಗಿ ಕೇಳಬಹುದಾದ ಸ್ಥಳದಿಂದ ಮಾತನಾಡುತ್ತಿದ್ದೇನೆ.

ಭಯೋತ್ಪಾದನೆಯ ಪೋಷಕರಿಗೆ ಅವರ ದುರುದ್ದೇಶಗಳು ಎಂದಿಗೂ ಯಶಸ್ವಿಯಾಗುವುದಿಲ್ಲ ಎಂದು ನಾನು ಹೇಳಲು ಬಯಸುತ್ತೇನೆ. ನಮ್ಮ ಸೈನಿಕರು ಭಯೋತ್ಪಾದನೆಯನ್ನು ಸಂಪೂರ್ಣ ಬಲದಿಂದ ಹತ್ತಿಕ್ಕುತ್ತಾರೆ ಮತ್ತು ಶತ್ರುಗಳಿಗೆ ತಕ್ಕ ಉತ್ತರ ನೀಡಲಾಗುವುದು “ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti