ಚಿನ್ನಾಭರಣ ಮಳಿಗೆಗೆ ನುಗ್ಗಿ ದರೋಡೆ: ‘ಕಳ್ಳ’ಪೊಲೀಸ್ ಸಹಿತ 6 ಆರೋಪಿಗಳ ಬಂಧನ!
ಬೆಂಗಳೂರು: ಚಿನ್ನಾಭರಣ ತಯಾರಿಸುವ ಮಳಿಗೆಗೆ ನುಗ್ಗಿ ದರೋಡೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲಸೂರು ಗೇಟ್ ಠಾಣೆ ಪೊಲೀಸರು ಕಾಡುಗೋಡಿ ಠಾಣೆಯ ಕಾನ್ಸ್ಟೇಬಲ್ ನ್ನು ಬಂಧಿಸಿದ್ದು, ಇನ್ನೋರ್ವನ ಬಂಧನಕ್ಕಾಗಿ ಬಲೆ ಬೀಸಿದ್ದಾರೆ.
ಕಾಡುಗೋಡಿ ಠಾಣೆಯ ಕಾನ್ಸ್ಟೇಬಲ್ ಅಶೋಕ್ ಬಂಧಿತ ಆರೋಪಿಯಾಗಿದ್ದಾನೆ. ಇಬ್ಬರು ಕಾನ್ಸ್ಟೇಬಲ್ಗಳು ಸೇರಿದಂತೆ 9 ಮಂದಿಪೊಲೀಸರು ಎಂದು ಹೇಳಿಕೊಂಡು ನ.11ರಂದು ರಾತ್ರಿ ನಗರ್ತ್ಪೇಟೆ ಚಿನ್ನಾಭರಣ ತಯಾರಿಸುವ ಮಳಿಗೆಗೆ ನುಗ್ಗಿ ಅಲ್ಲಿನ ಸಿಬ್ಬಂದಿಯನ್ನು ಬೆದರಿಸಿ 300 ಗ್ರಾಂ ಚಿನ್ನಾಭರಣ ಹಾಗೂ ಮೊಬೈಲ್ ದೋಚಿ ಪರಾರಿಯಾಗಿದ್ದರು.
ಘಟನೆ ಸಂಬಂಧ ಮಳಿಗೆಯ ಮಾಲೀಕ ಕಾರ್ತಿಕ್ ಎಂಬುವರು ಹಲಸೂರು ಗೇಟ್ ಠಾಣೆಗೆ ದೂರು ನೀಡಿದ್ದರು. ಹಲಸೂರು ಗೇಟ್ ಠಾಣೆ ಪೊಲೀಸರು ಕಾನ್ಸ್ಟೇಬಲ್ ಸೇರಿದಂತೆ 6 ಮಂದಿಯನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿದ್ದು, ಇನ್ನೊಬ್ಬ ಕಾನ್ ಸ್ಟೇಬಲ್ ಸೇರಿ ಉಳಿದ ಮೂವರು ಆರೋಪಿಗಳ ಬಂಧನಕ್ಕೆ ಶೋಧ ನಡೆಸುತ್ತಿದ್ದಾರೆ.
Disclaimer:
www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.